ಸಾಂದರ್ಭಿಕ ಚಿತ್ರ 
ರಾಜ್ಯ

ಲಾಕ್ ಡೌನ್ ಹಿನ್ನೆಲೆ: ಮುಂಬಯಿಗೆ ಶಿವಮೊಗ್ಗ ಮಾವಿನ ಹಣ್ಣು ರವಾನೆ

ಕೊರೋನಾ ಭೀತಿಯಿಂದಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಶಿವಮೊಗ್ಗ ಜಿಲ್ಲೆಯ ಸೊರಬ ಮತ್ತು ಅನವಟ್ಟಿ ರೈತರು ತಾವು ಬೆಳೆದ ಮಾವಿನ ಹಣ್ಣುಗಳನ್ನು ಮುಂಬಯಿಗೆ ರವಾನಿಸುತ್ತಿದ್ದಾರೆ.

ಶಿವಮೊಗ್ಗ: ಕೊರೋನಾ ಭೀತಿಯಿಂದಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಶಿವಮೊಗ್ಗ ಜಿಲ್ಲೆಯ ಸೊರಬ ಮತ್ತು ಅನವಟ್ಟಿ ರೈತರು ತಾವು ಬೆಳೆದ ಮಾವಿನ ಹಣ್ಣುಗಳನ್ನು ಮುಂಬಯಿಗೆ ರವಾನಿಸುತ್ತಿದ್ದಾರೆ.

ರೈತರು ತಮಗೆ ದೊರೆತ ಬೆಲೆಯಲ್ಲಿ ಸಂತೋಷವಾಗಿದ್ದು ಮುಂಬರುವ ದಿನಗಳಲ್ಲೂ ಉಳಿದ ಉತ್ಪನ್ನಗಳನ್ನು ಮುಂಬಯಿಯಲ್ಲೇ ಮಾರಾಟ ಮಾಡುವ ಭರವಸೆ  ವ್ಯಕ್ತ ಪಡಿಸಿದ್ದಾರೆ.

ಆಲ್ಫಾನ್ಸೋ, ರಸಪೂರಿ, ಮಲಿಕಾ, ನೀಲಂ ಬಗೆ ಹಣ್ಣುಗಳನ್ನು ಸೊರಬ, ಶಿವಮೊಗ್ಗ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಸುಮಾರು 2,500 ಹೆಕ್ಟೇರ್ ಗಳಲ್ಲಿ ಮಾವು ಬೆಳೆದಿದ್ದಾರೆ.

ಮಾವಿನ ಹಣ್ಣು ನಿಧಾನವಾಗಿ ಮಾರುಕಟ್ಟೆಗೆ ಪ್ರವೇಶಿಸಲಿದ್ದು,ಈ ವರ್ಷ 5ರಿಂದ 6 ಸಾವಿರ ಟನ್ ಮಾವು ಬೆಳೆ ಬರಲಿದೆ ಎಂದು ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಯೋಗೇಶ್ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಮಾವು ಬೆಳೆಗಾರರು ಉತ್ತರ ಕರ್ನಾಟಕ ಮತ್ತು ಮುಂಬಯಿ ಮಾರುಕಟ್ಟೆ ಅವಲಂಬಿಸಿದ್ದು ಇಲ್ಲಿನ ಆಹಾರ ಉತ್ಪಾದನಾ ಘಟಕಗಳಿಗೆ ಪೂರೈಸುತ್ತಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT