ಸಿದ್ದರಾಮಯ್ಯ 
ರಾಜ್ಯ

​ಹಸಿವಿಗೆ ಜಾತಿ, ಧರ್ಮವಿಲ್ಲ, ಹಸಿದವರನ್ನು ರಾಜಕೀಯದ ಕಣ್ಣುಗಳಿಂದ ನೋಡಬೇಡಿ: ಸಿದ್ದರಾಮಯ್ಯ

ಹಸಿವಿಗೆ ಜಾತಿ ಧರ್ಮ, ಪಕ್ಷ ಮತ್ತು ಪಂಗಡ ಎಂಬುದು ಇರುವುದಿಲ್ಲ, ಹಸಿದವರನ್ನು ರಾಜಕೀಯದ ಕಣ್ಣುಗಳಿಂದ ನೋಡಬೇಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬೆಂಗಳೂರು: ಹಸಿವಿಗೆ ಜಾತಿ ಧರ್ಮ, ಪಕ್ಷ ಮತ್ತು ಪಂಗಡ ಎಂಬುದು ಇರುವುದಿಲ್ಲ, ಹಸಿದವರನ್ನು ರಾಜಕೀಯದ ಕಣ್ಣುಗಳಿಂದ ನೋಡಬೇಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ ಬಿಟಿಎಂ ಲೇಔಟ್ ನಲ್ಲಿ ಆರಂಭಿಸಿರುವ ಅನ್ನ ದಾಸೋಹ ಕೇಂದ್ರಕ್ಕೆ ಭೇಟಿ ನೀಡಿ ಅಡುಗೆ ತಯಾರಿ ವೀಕ್ಷಿಸಿದರು. ಕ್ಷೇತ್ರದ ವಿವಿಧ ಬಡಾವಣೆಗಳಿಗೆ ತೆರಳಿ ಜನರಿಗೆ ಆಹಾರದ ಪ್ಯಾಕೆಟ್‍ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಬಿಟಿಎಂ ವಿಧಾನಸಭೆ ಕ್ಷೇತ್ರದಲ್ಲಿ ರಾಮಲಿಂಗಾರೆಡ್ಡಿ ಅವರು ದವಸ, ಧಾನ್ಯ, ಆಹಾರ, ತರಕಾರಿಯನ್ನು ಬಡವರು, ವಲಸಿಗ ಕಾರ್ಮಿಕರಿಗೆ ಲಾಕ್‍ಡೌನ್ ಆದಾಗಿನಿಂದ ವಿತರಣೆ ಮಾಡುತ್ತಿದ್ದಾರೆ. 48 ಸಾವಿರ ಜನರಿಗೆ ನಿತ್ಯ ಅವರಿಂದಾಗಿ ಅನ್ನ ದಾಸೋಹ ನಡೆಯುತ್ತಿದೆ. ಅವರ ಈ ಕಾರ್ಯ ಶ್ಲಾಘನೀಯ. ಇದಕ್ಕಾಗಿ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರ ಹಸಿದವರಿಗೆ ಆಹಾರದ ಪ್ಯಾಕೇಟ್ ನೀಡುವುದಾಗಿ ಹೇಳಿದೆ. ಆದರೆ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲಿ ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ. ರಾಮಲಿಂಗಾರೆಡ್ಡಿಯವರು ಒತ್ತಡ ಹೇರಿದ ಕಾರಣಕ್ಕೆ ಅವರ ಕ್ಷೇತ್ರಕ್ಕಾಗಿ ಸರ್ಕಾರದ ಕಡೆಯಿಂದ ಕೇವಲ ಐದು ಸಾವಿರ ಪ್ಯಾಕೇಟ್ ಬರುತ್ತಿದೆ. ಆದರೆ ರಾಮಲಿಂಗಾರೆಡ್ಡಿಯವರು ಸ್ವಂತ ಖರ್ಚಿನಲ್ಲಿ ಸಂಘ, ಸಂಸ್ಥೆಗಳ ನೆರವಿನೊಂದಿಗೆ ಊಟ, ತಿಂಡಿ, ದಿನಸಿ, ತರಕಾರಿ ವಿತರಣೆ ಮಾಡುತ್ತಿದ್ದಾರೆ. ಮನುಷ್ಯತ್ವ, ಮಾನವೀಯತೆಯಿಂದ ರೆಡ್ಡಿಯವರು ಈ ಕೆಲಸ ಮಾಡುತ್ತಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT