ಡಿ.ಎಚ್ ಶಂಕರಮೂರ್ತಿ ಪ್ರಧಾನಿ ನರೇಂದ್ರ ಮೋದಿ 
ರಾಜ್ಯ

ಕೊರೋನಾ ಹಿನ್ನೆಲೆ: ಮಾಜಿ ಸಭಾಪತಿ ಶಂಕರಮೂರ್ತಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಧಾನ ಪರಿಷತ್ ನ ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು, ಇದಕ್ಕೆ ಶಂಕರಮೂರ್ತಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. 

ಶಿವಮೊಗ್ಗ:  ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಧಾನ ಪರಿಷತ್ ನ ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು, ಇದಕ್ಕೆ ಶಂಕರಮೂರ್ತಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇಂದು ಮುಂಜಾನೆ 8.40ರ ಸಮಯದಲ್ಲಿ ಮನೆಯಲ್ಲಿ ಪತ್ರಿಕೆ ಓದುತ್ತಿದ್ದೆ. ಈ ವೇಳೆ ನನ್ನ ಮೊಬೈಲ್ ಗೆ ಒಂದು ದೂರವಾಣಿ ಕರೆ ಬಂತು. ಹಿಂದಿಯಲ್ಲಿ ಮಾತನಾಡುತ್ತಿದ್ದ ಅವರು ಡಿ.ಎಚ್ ಶಂಕರಮೂರ್ತಿ ಅವರಿಗೆ ಪೋನ್ ಕೊಡಿ ಅಂದರು. ನಾನು ನಾನೇ ಶಂಕರಮೂರ್ತಿ ಮಾತನಾಡುತ್ತಿದ್ದೇನೆ ಎಂದಾಗ ಪ್ರಧಾನಮಂತ್ರಿ ಅವರ ಕಚೇರಿಯಿಂದ ಮಾತನಾಡುತ್ತಿದ್ದೇನೆ. ಪ್ರಧಾನಿಯವರು ತಮ್ಮ ಜೊತೆ ಮಾತನಾಡಬೇಕಂತೆ. ಇನ್ನು ಐದು ನಿಮಿಷದಲ್ಲಿ ಕರೆ ಬರಬಹುದು ತಮ್ಮ ಮೊಬೈಲ್ ಬ್ಯುಸಿ ಇಟ್ಟುಕೊಳ್ಳಬೇಡಿ ಎಂದರು.

ನನಗೆ ಒಂದು ರೀತಿ ಆಶ್ಚರ್ಯ ಹಾಗೂ ಅನುಮಾನ ಕಾಡಿತು. ಇಂತಹ ಸಮಯದಲ್ಲಿ ಪ್ರಧಾನಿಯವರು ನನಗೆ ಕರೆ ಮಾಡುತ್ತಾರಾ ಅಂದುಕೊಂಡು ಸುಮ್ಮನಾದೆ. ಆದರೆ ನಾನು ಮೊದಲು ಮಾತನಾಡಿದವರ ಜೊತೆ ಮೊಬೈಲ್ ಇಟ್ಟು ಐದು ನಿಮಿಷದ ನಂತರದಲ್ಲಿಯೇ ಫೋನ್ ಬಂತು. ಆ ಕಡೆಯಿಂದ ಪ್ರಧಾನಿಯವರೇ ಮಾತನಾಡಿದರು.

ಪೋನ್ ಮಾಡಿದವರೇ ಮೋದಿಯವರು, ಶಂಕರಮೂರ್ತಿ ಅವರೇ ಹೇಗಿದ್ದೀರಿ. ಕೊರೊನಾ ಸಮಯದಲ್ಲಿ ನಿಮ್ಮ ಆರೋಗ್ಯ ಹೇಗೆ ನೋಡಿಕೊಳ್ಳುತ್ತಿದ್ದೀರಿ. ಈ ವೇಳೆ ಸಮಯ ಹೇಗೆ ಕಳೆಯುತ್ತಿದ್ದೀರಿ ಎಂದು ಪ್ರಶ್ನಿಸಿದರು. ಅಲ್ಲದೇ ನಿಮ್ಮ ಧ್ವನಿ ಕೇಳಿದರೆ ನೀವು ಆರೋಗ್ಯವಾಗಿದ್ದೀರಿ ಅನಿಸುತ್ತೆ ಅಂದರು.

ಆಗ ನಾನು ಕೊರೊನಾ ಸಮಯದಲ್ಲಿ ಮನೆಯಿಂದ ಹೊರಗೆ ಎಲ್ಲಿಯೂ ಹೋಗುತ್ತಿಲ್ಲ. ಮನೆಯಲ್ಲಿಯೇ ಪುಸ್ತಕ, ಪತ್ರಿಕೆ ಓದುತ್ತಿದ್ದೇನೆ. ಟಿವಿ ನೋಡುತ್ತಾ ಕಾಲ ಕಳೆಯುತ್ತಿದ್ದೇನೆ. ಆ ಮೂಲಕವೇ ಹೊರಗಡೆ ನಡೆಯುವ ವಿಷಯ ತಿಳಿದುಕೊಳ್ಳುತ್ತಿದ್ದೇನೆ. ಅಲ್ಲದೆ ನನಗೆ ದೂರವಾಣಿ ಮೂಲಕ ಯಾರಾದರೂ ಸಹಾಯ ಕೇಳಿದರೆ ಮನೆಯಿಂದಲೇ ಅಂತಹವರಿಗೆ ಸಹಾಯ ಮಾಡುವ ಕೆಲಸ ಮಾಡುತ್ತಿರುವುದಾಗಿ ತಿಳಿಸಿದೆ.

ಕೊರೊನಾ ನಡುವೆಯೂ ನನಗೆ ದೂರವಾಣಿ ಕರೆ ಮಾಡುತ್ತಾರೆ. ನನ್ನ ಆರೋಗ್ಯ ವಿಚಾರಿಸುತ್ತಾರೆ ಅಂದರೆ ನಿಜಕ್ಕೂ ಮೋದಿ ದೊಡ್ಡ ವ್ಯಕ್ತಿ. ಪ್ರಧಾನಿ ಅವರಿಂದ ನಾನು ದೂರವಾಣಿ ಕರೆ ನಿರೀಕ್ಷಿಸಿರಲಿಲ್ಲ. ಅವರು ನನಗೆ ಫೋನ್ ಮಾಡಿ ನನ್ನ ಬಗ್ಗೆ, ನನ್ನ ಆರೋಗ್ಯದ ಬಗ್ಗೆ ಕಾಳಜಿ ತೋರಿದ್ದು, ವಿಚಾರಿಸಿದ್ದು ನನಗೆ ತುಂಬ ಖುಷಿಯಾಯಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT