ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಭೀತಿ: ಗ್ರೀನ್ ಝೋನ್ ನಲ್ಲಿರುವ ಜನರನ್ನೂ ಪರೀಕ್ಷೆಗೊಳಪಡಿಸಲು ನಿರ್ಧಾರ

ರಾಜ್ಯದಲ್ಲಿರುವ ರೆಡ್ ಝೋನ್ ಹಾಗೂ ಆರೆಂಜ್ ಝೋನ್ ಗಳಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಗಳು ಏರುತ್ತಲೇ ಇರುವ ಹಿನ್ನೆಲೆಯಲ್ಲಿ, ಇದೀಗ ಗ್ರೀನ್ ಝೋನ್ ನಲ್ಲಿರುವ ಜನರನ್ನೂ ಕೂಡ ವೈದ್ಯಕೀಯ ಪರೀಕ್ಷೆಗೊಳಪಡಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು; ರಾಜ್ಯದಲ್ಲಿರುವ ರೆಡ್ ಝೋನ್ ಹಾಗೂ ಆರೆಂಜ್ ಝೋನ್ ಗಳಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಗಳು ಏರುತ್ತಲೇ ಇರುವ ಹಿನ್ನೆಲೆಯಲ್ಲಿ, ಇದೀಗ ಗ್ರೀನ್ ಝೋನ್ ನಲ್ಲಿರುವ ಜನರನ್ನೂ ಕೂಡ ವೈದ್ಯಕೀಯ ಪರೀಕ್ಷೆಗೊಳಪಡಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. 

ಗ್ರೀನ್ ಝೋನ್ ಗಳಲ್ಲಿ ಈ ವರೆಗೂ ಯಾವುದೇ ಸೋಂಕು ಪ್ರಕರಣಗಳು ಪತ್ತೆಯಾಗಿಲ್ಲ. ಅಲ್ಲದೆ, ಯಾರೊಬ್ಬರೂ ಕೂಡ ಕ್ವಾರಂಟೈನ್ ನಲ್ಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಲಕ್ಷಣಗಳೇ ಕಾಣಿಸಿದ ಜನರಲ್ಲೂ ವೈರಸ್ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ  ಈ ಪ್ರದೇಶಗಳನ್ನು ಮತ್ತಷ್ಟು ಸುರಕ್ಷಿತವಾಗಿರಿಸುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿದೆ ಎನ್ನಲಾಗುತ್ತಿದೆ. 

ಕೋಲಾರದಿಂದಲೇ ಈಗಾಗಲೇ ಕಾರ್ಯಾಚರಣೆ ಆರಂಭವಾಗಿದ್ದು, ದಿನಕ್ಕೆ 100-200 ಜನರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. 

ಪ್ರಸ್ತುತ ರಾಜ್ಯದಲ್ಲಿ ಪ್ರತೀನಿತ್ಯ 2,000 ಜನರನ್ನು ಪರೀಕ್ಷೆ ನಡೆಸಲಾಗುತ್ತಿದ್ದು, ಇನ್ನೂ 15,000 ಟೆಸ್ಟ್ ಕಿಟ್ ಗಳಿವೆ ಎನ್ನಲಾಗುತ್ತಿದೆ. ಸರ್ಕಾರ ಇದೀಗ ಜಪಾನ್ ಮಾದರಿಯನ್ನು ಅನುಸರಿಸಲು ನಿರ್ಧರಿಸಿದೆ. ಲಕ್ಷಣ ರಹಿತ ವ್ಯಕ್ತಿಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗು ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT