ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಭೀತಿ: ಗ್ರೀನ್ ಝೋನ್ ನಲ್ಲಿರುವ ಜನರನ್ನೂ ಪರೀಕ್ಷೆಗೊಳಪಡಿಸಲು ನಿರ್ಧಾರ

ರಾಜ್ಯದಲ್ಲಿರುವ ರೆಡ್ ಝೋನ್ ಹಾಗೂ ಆರೆಂಜ್ ಝೋನ್ ಗಳಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಗಳು ಏರುತ್ತಲೇ ಇರುವ ಹಿನ್ನೆಲೆಯಲ್ಲಿ, ಇದೀಗ ಗ್ರೀನ್ ಝೋನ್ ನಲ್ಲಿರುವ ಜನರನ್ನೂ ಕೂಡ ವೈದ್ಯಕೀಯ ಪರೀಕ್ಷೆಗೊಳಪಡಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು; ರಾಜ್ಯದಲ್ಲಿರುವ ರೆಡ್ ಝೋನ್ ಹಾಗೂ ಆರೆಂಜ್ ಝೋನ್ ಗಳಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಗಳು ಏರುತ್ತಲೇ ಇರುವ ಹಿನ್ನೆಲೆಯಲ್ಲಿ, ಇದೀಗ ಗ್ರೀನ್ ಝೋನ್ ನಲ್ಲಿರುವ ಜನರನ್ನೂ ಕೂಡ ವೈದ್ಯಕೀಯ ಪರೀಕ್ಷೆಗೊಳಪಡಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. 

ಗ್ರೀನ್ ಝೋನ್ ಗಳಲ್ಲಿ ಈ ವರೆಗೂ ಯಾವುದೇ ಸೋಂಕು ಪ್ರಕರಣಗಳು ಪತ್ತೆಯಾಗಿಲ್ಲ. ಅಲ್ಲದೆ, ಯಾರೊಬ್ಬರೂ ಕೂಡ ಕ್ವಾರಂಟೈನ್ ನಲ್ಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಲಕ್ಷಣಗಳೇ ಕಾಣಿಸಿದ ಜನರಲ್ಲೂ ವೈರಸ್ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ  ಈ ಪ್ರದೇಶಗಳನ್ನು ಮತ್ತಷ್ಟು ಸುರಕ್ಷಿತವಾಗಿರಿಸುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿದೆ ಎನ್ನಲಾಗುತ್ತಿದೆ. 

ಕೋಲಾರದಿಂದಲೇ ಈಗಾಗಲೇ ಕಾರ್ಯಾಚರಣೆ ಆರಂಭವಾಗಿದ್ದು, ದಿನಕ್ಕೆ 100-200 ಜನರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. 

ಪ್ರಸ್ತುತ ರಾಜ್ಯದಲ್ಲಿ ಪ್ರತೀನಿತ್ಯ 2,000 ಜನರನ್ನು ಪರೀಕ್ಷೆ ನಡೆಸಲಾಗುತ್ತಿದ್ದು, ಇನ್ನೂ 15,000 ಟೆಸ್ಟ್ ಕಿಟ್ ಗಳಿವೆ ಎನ್ನಲಾಗುತ್ತಿದೆ. ಸರ್ಕಾರ ಇದೀಗ ಜಪಾನ್ ಮಾದರಿಯನ್ನು ಅನುಸರಿಸಲು ನಿರ್ಧರಿಸಿದೆ. ಲಕ್ಷಣ ರಹಿತ ವ್ಯಕ್ತಿಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗು ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT