ಮಹೇಂದ್ರ ಕುಮಾರ್ 
ರಾಜ್ಯ

ಪ್ರಗತಿಪರ ಚಿಂತಕ-ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್‌ ನಿಧನ

ಪ್ರಗತಿಪರ ಚಿಂತಕ-ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್‌ ಇಂದು ಬೆಳಗ್ಗೆ ಹೃದಯಾಘಾತದಿಂದಾಗಿ ಎಂ.ಎಸ್‌. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಂಗಳೂರು: ಪ್ರಗತಿಪರ ಚಿಂತಕ-ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್‌ ಇಂದು ಬೆಳಗ್ಗೆ ಹೃದಯಾಘಾತದಿಂದಾಗಿ ಎಂ.ಎಸ್‌. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ನಿನ್ನೆ ರಾತ್ರಿಯೇ ಅವರಿಗೆ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಚಿಕಿತ್ಸೆಗಾಗಿ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದ ಅವರು ಅದರಿಂದ ಹೊರಬಂದ ಬಳಿಕ ಸಾಮಾಜಿಕ, ಜಾಗೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದರು. ಬಿಜೆಪಿ, ಸಂಘ ಪರಿವಾರದ ಸಿದ್ಧಾಂತ ವಿರೋಧಿಸಿ ಸಾಕಷ್ಟು ನಿಷ್ಠುರಗಳನ್ನೂ ಕಟ್ಟಿಕೊಂಡಿದ್ದರು. ಮೂಲತ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾದ ಮಹೇಂದ್ರ ಕುಮಾರ್ ಬೆಂಗಳೂರು ವಾಸಿಯಾಗಿದ್ದರು.

"ನಮ್ಮ ಧ್ವನಿ" ಎಂಬ ಸಂಘಟನೆ ಸಂಸ್ಥಾಪಕರಾಗಿದ್ದ ಅವರು ನಮ್ಮ ಧ್ವನಿ ಯೂಟ್ಯೂಬ್ ಚಾನೆಲ್ ಮೂಲಕ ವಿವಿಧ ವಿಷಯಗಳ ಬಗ್ಗೆ ಮಾತನಾಡಿ ಜನಪ್ರಿಯರಾಗಿದ್ದರು. ಜನಪರ ಹೋರಾಟಗಾರ, ಶಾಂತಿಪ್ರಿಯ, ಸೌಹಾರ್ದಪರ, ಪ್ರಗತಿಪರ ನಿಲುವುಗಳ ಮಹೇಂದ್ರ ಕುಮಾರ್ ಅವರ ನಿಧನ ರಾಜ್ಯಕ್ಕೆ ಬಹು ದೊಡ್ಡ ಆಘಾತವಾಗಿದೆ. ಮಹೇಂದ್ರ ಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT