ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಸಂಕಷ್ಟ: ರಾಜ್ಯದಲ್ಲಿ ಶೇ.40 ರಷ್ಟು ಕೈಗಾರಿಕೆಗಳು ಮುಚ್ಚುವ ಹಂತದಲ್ಲಿವೆ: ಕಾಸಿಯಾ ಅಧ್ಯಕ್ಷ ಆರ್. ರಾಜು

ರಾಜ್ಯದಲ್ಲಿ ಕೊರೋನಾ ವೈರಸ್ ಹೊಡೆತ ಮತ್ತು ಲಾಕ್ ಡೌನ್ ನಿಂದಾಗಿ ಶೇ 40 ರಷ್ಟು ಕೈಗಾರಿಕೆಗಳು ಮುಚ್ಚುವ ಹಂತದಲ್ಲಿದ್ದು, ಕೈಗಾರಿಕೆಗಳನ್ನೇ ನಂಬಿರುವ ಲಕ್ಷಾಂತರ ನೌಕರರು ಬೀದಿ ಪಾಲಾಗುವ ಆತಂಕ ಎದುರಾಗಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕಾ ಸಂಘ–  ಕಾಸಿಯಾ (KASSIA-Karnataka Small Scale Industries Association) ಅಧ್ಯಕ್ಷ ಆರ್.ರಾಜು ತೀವ್ರ ಆತಂಕ ವ್ಯಕ್ತಪಡಿಸಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಹೊಡೆತ ಮತ್ತು ಲಾಕ್ ಡೌನ್ ನಿಂದಾಗಿ ಶೇ 40 ರಷ್ಟು ಕೈಗಾರಿಕೆಗಳು ಮುಚ್ಚುವ ಹಂತದಲ್ಲಿದ್ದು, ಕೈಗಾರಿಕೆಗಳನ್ನೇ ನಂಬಿರುವ ಲಕ್ಷಾಂತರ ನೌಕರರು ಬೀದಿ ಪಾಲಾಗುವ ಆತಂಕ ಎದುರಾಗಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕಾ ಸಂಘ–  ಕಾಸಿಯಾ (KASSIA-Karnataka Small Scale Industries Association) ಅಧ್ಯಕ್ಷ ಆರ್.ರಾಜು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. 

ರಾಜ್ಯದ ಆರ್ಥಿಕತೆಗೆ ಹೆಚ್ಚಿನ ಕೊಡುಗೆ ನೀಡುತ್ತಿರುವ ಸೂಕ್ಷ್ಮ ಹಾಗೂ ಸಣ್ಣ ಕೈಗಾರಿಕೆಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಸೂಕ್ತ ನಿರ್ದೇಶನಗಳನ್ನು ಕೊಡಬೇಕು ಎಂದಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ  ಅವರು, ಲಾಕ್ ಡೌನ್ ನಿಂದಾಗಿ ಕೈಗಾರಿಕೆಗಳು ತೀವ್ರ ಸಂಕಷ್ಟಕ್ಕೆ ಒಳಗಾಗಿವೆ. ವಿಶೇಷವಾಗಿ ಹಣಕಾಸು ಸಮಸ್ಯೆಗಳಿಂದ ಕಾರ್ಮಿಕರ ಸಂಕಷ್ಟಗಳು ಹೆಚ್ಚಾಗಿವೆ. ಬಾಡಿಗೆ ಪಾವತಿ. ಬ್ಯಾಂಕುಗಳು ಬಡ್ಡಿ ಸಮಸ್ಯೆಗಳಿಗೆ ಯಾವುದೇ ನಿರ್ದಿಷ್ಟ ಪರಿಹಾರ ಲಭಿಸಿಲ್ಲ. ದೊರೆತಿರುವ ಅಲ್ಪ ಮಟ್ಟಿನ  ಪರಿಹಾರಗಳನ್ನು ಸಂಬಂದಪಟ್ಟ ಇಲಾಖೆಗಳು ಅನುಷ್ಠಾನಗೊಳಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಪ್ರಮುಖವಾಗಿ ಎಫ್ ಐ ಆರ್ ಸಿ ಬಿಲ್ಲುಗಳನ್ನು ಕ್ಲಿಯರ್ ಮಾಡಿಸಲು ಕಾಲಾವಕಾಶ ವಿಸ್ತರಣೆ ಮಾಡಬೇಕು. ಅವಧಿ ಸಾಲ, ಓಡಿ, ಓಸಿಸಿ ಗಳಿಗೆ ಸಂಬಂಧಿಸಿದಂತೆ ಪ್ರೋಸೆಸಿಂಗ್, ಡಾಕ್ಯುಮೆಂಟೇಶನ್ ಶುಲ್ಕಗಳನ್ನು ಮನ್ನಾ ಅಥವಾ ಕಡಿಮೆ ಮಾಡಬೇಕು, ಈಗಾಗಲೇ ಕೇಂದ್ರ ಹಾಗೂ ರಾಜ್ಯ  ಸರ್ಕಾರಗಳಿಂದ ಘೋಷಿಸಲಾದ ರಿಯಾಯಿತಿ ಮತ್ತು ಯೋಜನೆಗಳನ್ನು ಬ್ಯಾಂಕುಗಳು ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಬೇಕು. ವಿವಿಧ ಸಾಲದ ಮೇಲಿನ ಬಡ್ಡಿಯನ್ನು ೩ ತಿಂಗಳುಗಳ ಕಾಲ ಮನ್ನಾ ಮಾಡಬೇಕು. ಎಸ್.ಎಂ.ಇ.ಗಳ ಹಣಕಾಸು ಸಮಸ್ಯೆಗಳನ್ನು ಪರಿಹರಿಸಲು  ಎಲ್ಲಾ ಬ್ಯಾಂಕುಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲು ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. 

ಎಲ್ಲಾ ಬಗೆಯ ವಿದ್ಯುತ್ ಹಾಗೂ ಜಿ.ಎಸ್.ಟಿ ಸಮಸ್ಯೆಗಳನ್ನು ಬಗೆಹರಿಸಬೇಕು. ೬ ತಿಂಗಳುಗಳ ಇ.ಎಸ್.ಐ. ಮತ್ತು ಪಿ.ಎಫ್. ವಂತಿಗೆ ಪಾವತಿಯನ್ನು ಮನ್ನಾ ಮಾಡಬೇಕು. ವೇತನ ಪಾವತಿಗಾಗಿ ಲಾಕ್ ಡೌನ್ ಸಮಯದಲ್ಲಿ ಕೆಲಸದ ದಿನಗಳ ಸಂಖ್ಯೆಯನ್ನು ೨೫ ದಿನಗಳು ಎಂದು  ಪರಿಗಣಿಸಿ, ಶೇ ೭೦ ರಷ್ಟು ವೇತನವನ್ನು ಇ.ಎಸ್.ಐ.ಸಿ. ಅಥವಾ ಕಲ್ಯಾಣ ನಿಧಿಯ ಮೂಲಕ ನೀಡಲು ಶಿಫಾರಸ್ಸು ಮಾಡಬೇಕು. ಮುಂದಿನ ೩ ವರ್ಷಗಳ ವರೆಗೆ ವೇತನ ಹೆಚ್ಚಳ, ಪರಿಷ್ಕರಣೆಗೆ ಅವಕಾಶ ಕೊಡಬಾರದು. ಲಾಕ್ಡೌನ್ ಸಮಯದ ನಷ್ಟ ಸರಿದೂಗಿಸಲು ಕೆಲಸದ ಸಮಯವನ್ನು  ೧೦ ಗಂಟೆಗಳಿಗೆ ಹೆಚ್ಚಿಸಬೇಕು ಎಂದು ಆರ್ ರಾಜು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT