ಶಾಸಕ ಎಸ್.ಆರ್. ವಿಶ್ವನಾಥ್ ಮತ್ತು ಪಾದರಾಯನಪುರ ಗಲಾಟೆ ಆರೋಪಿಗಳ ಚಿತ್ರ 
ರಾಜ್ಯ

ಪಾದರಾಯನಪುರ ಗಲಾಟೆ: ಆರೋಪಿಗಳಿಗೆ ಐಷರಾಮಿ ಹೋಟೆಲ್ ಕ್ವಾರಂಟೈನ್ ಸರಿಯಲ್ಲ- ಎಸ್. ಆರ್. ವಿಶ್ವನಾಥ್ ಕಿಡಿ

ದೇಶದಲ್ಲಿ ಅರ್ಧಭಾಗಕ್ಕೆ  ಕೊರೋನಾ ವೈರಸ್ ಹರಡಿಸಿದ ತಬ್ಲೀಘಿಗಳು  ದೇಶದ್ರೋಹಿಗಳು. ಅವರೊಂದಿಗೆ ಸಂಪರ್ಕ ಹೊಂದಿದವರಿಗೆ ಯಾವುದೇ ರೀತಿಯ ವೈಭೋಗದ ಸೌಲಭ್ಯಗಳನ್ನು ನೀಡಬಾರದೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಕಿಡಿಕಾರಿದ್ದಾರೆ

ಯಲಹಂಕ: ದೇಶದಲ್ಲಿ ಅರ್ಧಭಾಗಕ್ಕೆ  ಕೊರೋನಾ ವೈರಸ್ ಹರಡಿಸಿದ ತಬ್ಲೀಘಿಗಳು  ದೇಶದ್ರೋಹಿಗಳು. ಅವರೊಂದಿಗೆ ಸಂಪರ್ಕ ಹೊಂದಿದವರಿಗೆ ಯಾವುದೇ ರೀತಿಯ ವೈಭೋಗದ ಸೌಲಭ್ಯಗಳನ್ನು ನೀಡಬಾರದೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಕಿಡಿಕಾರಿದ್ದಾರೆ

ಯಲಹಂಕದ ಅಳ್ಳಾಳಸಂದ್ರದಲ್ಲಿರುವ ರಾಯಲ್ ಆರ್ಕಿಡ್ ಹೋಟೇಲ್ ಮುಂದೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾದರಾಯನಪುರದ ಗಲಾಟೆ ಪ್ರಕರಣದ ಆರೋಪಿಗಳನ್ನು ರಾಯಲ್ ಆರ್ಕಿಡ್ ಹೋಟೇಲ್ ನಲ್ಲಿಟ್ಟಿರುವುದು ಸರಿಯಲ್ಲ. ತಬ್ಲೀಘಿಗಳಿಗೆ ಯಲಹಂಕ ಕ್ಷೇತ್ರದಲ್ಲಿರಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ.ಇವರಿಗೆ ಮಸೀದಿಗಳಲ್ಲಿ ರಕ್ಷಣೆ ಕೊಡುತ್ತಿದ್ದವರು ಈಗ ಮಸೀದಿಗಳಲ್ಲೇ ಹೋಂ ಕ್ವಾರೆಂಟೈನ್ ನಲ್ಲಿಟ್ಟುಕೊಳ್ಳಲಿ ಎಂದರು.

ಯಲಹಂಕ ಕ್ಷೇತ್ರದ ಜನತೆ ಲಾಕ್ ಡೌನ್ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸುತ್ತಿರುವಾಗ ಈ ತಬ್ಲೀಘಿಗಳಿಂದ ಕೊರೋನಾ ವೈರಸ್ ಸೋಂಕು ಹರಡಿದರೆ ಇಷ್ಟು ದಿನಗಳ ಶ್ರಮ ವ್ಯರ್ಥವಾಗುತ್ತದೆ. ಜನವಸತಿ ಪ್ರದೇಶದಲ್ಲಿ ಹೋಂ ಕ್ವಾರೆಂಟೈನ್ ಮಾಡಿದರೆ ಅದರಿಂದಾಗುವ ಅನಾಹುತ ಊಹಿಸಲೂ ಸಾಧ್ಯವಿಲ್ಲ. ಬಿಬಿಎಂಪಿ ಅಧಿಕಾರಿಗಳು ಮತ್ತು ಕೆಲ ಹಿರಿಯ ಅಧಿಕಾರಿಗಳು ತೆಗೆದುಕೊಂಡಿರುವ ಈ ನಿರ್ಧಾರದಿಂದಾಗಿ ಕ್ಷೇತ್ರದ ಜನತೆಯ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ರಾಯಲ್ ಆರ್ಕಿಡ್ ಹೋಟೆಲ್ ಮ್ಯಾನೇಜ್ ಮೆಂಟ್ ಕೂಡ ಹಣದ ದುರಾಸೆಗೆ ಬಿದ್ದು ತಬ್ಲೀಘಿಗಳಿಗೆ ಹೋಂ ಕ್ವಾರೆಂಟೈನ್ ನಲ್ಲಿಡಲು ಅವಕಾಶ ಮಾಡಿಕೊಟ್ಟಿರುವುದು ಸರಿಯಲ್ಲ ಎಂದರು. ತಬ್ಲೀಘಿಗಳನ್ನು ಹೋಟೇಲ್ ನಲ್ಲಿಟ್ಟಿರುವ ವಿಷಯ ತಿಳಿಯುತ್ತಿದ್ದಂತೆ ಸಾವಿರಾರು ಜನ ಹೊಟೇಲ್ ಮುಂದೆ ಜಮಾಯಿಸಿ ಶಾಸಕರ ನೇತೃತ್ವದಲ್ಲಿ ಪ್ರತಿಭಟಿಸಿದರು. ಸ್ಥಳೀಯರ ವಿರೋಧಕ್ಕೆ ಮಣಿದ ಅಧಿಕಾರಿಗಳು ಇವರನ್ನು ಬೇರೆಡೆಗೆ ಸ್ಥಳಾಂತರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT