ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸುದ್ದಿ ವಾಹಿನಿಯ ಕ್ಯಾಮೆರಾಮನ್ ಗೆ ಕೊರೋನಾ ಪಾಸಿಟಿವ್

ನಗರದ ಪತ್ರಕರ್ತರಿಗೂ ಮಹಾಮಾರಿ ಕೊರೋನಾ ವೈರಸ್ ವಕ್ಕರಿಸಿದ್ದು, ಸ್ಥಳೀಯ ಸುದ್ದಿ ವಾಹಿನಿಯ ಕ್ಯಾಮೆರಾಮನ್ ಒಬ್ಬರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ನಗರದ ಪತ್ರಕರ್ತರಿಗೂ ಮಹಾಮಾರಿ ಕೊರೋನಾ ವೈರಸ್ ವಕ್ಕರಿಸಿದ್ದು, ಸ್ಥಳೀಯ ಸುದ್ದಿ ವಾಹಿನಿಯ ಕ್ಯಾಮೆರಾಮನ್ ಒಬ್ಬರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ರಾಜ್ಯದಲ್ಲಿ ಹೊಸದಾಗಿ ಸುದ್ದಿ ವಾಹಿನಿಯ ಪತ್ರಕರ್ತ ಸೇರಿದಂತೆ 15 ಮಂದಿಗೆ ಕೊವಿಡ್-19 ಪಾಸಿಟಿವ್ ಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ.

ರಾಜ್ಯ ಆರೋಗ್ಯ ಇಲಾಖೆ ನಿನ್ನೆಯಿಂದ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದವರನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸುತ್ತಿದ್ದು, ಶುಕ್ರವಾರ ಒಟ್ಟು 120 ಮಂದಿಯನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಸುದ್ದಿ ವಾಹಿನಿಯ ಓರ್ವ ಕ್ಯಾಮೆರಾಮನ್ ಗೆ ಪಾಸಿಟಿವ್ ಬಂದಿದ್ದು, ಉಳಿದ 119 ಮಂದಿಗೆ ನೆಗಟಿವ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಲಾ ಪತ್ರಕರ್ತರನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆದೇಶಿಸಿದ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಶುಕ್ರವಾರದಿಂದ ಮೂರು ದಿನಗಳ ಕಾಲ ಮಾಧ್ಯಮದವರನ್ನು ತಪಾಸಣೆಗೆ ಒಳಪಡಿಸುತ್ತಿದೆ.

ಪತ್ರಕರ್ತರು ಸ್ವಯಂ ಪ್ರೇರಿತರಾಗಿ ಕೊವಿಡ್-19 ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದು, ಇಂದು ಸಹ ಸುಮಾರು 200 ಪತ್ರಕರ್ತರನ್ನು ಪರೀಕ್ಷಿಸಲಾಗಿದೆ ಎಂದು ವಾರ್ತಾ ಇಲಾಖೆ ಜಂಟಿ ಕಾರ್ಯದರ್ಶಿ ಡಿಪಿ ಮುರಳೀಧರ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT