ಬಾಲಚಂದ್ರ ಜಾರಕಿಹೊಳಿ 
ರಾಜ್ಯ

ನಂದಿನಿ ಮಳಿಗೆಗಳ ಬಳಿ ಹಣ್ಣು, ತರಕಾರಿ ಮಾರಾಟಕ್ಕೆ ಒಪ್ಪಿಗೆ: ಬಾಲಚಂದ್ರ ಜಾರಕಿಹೊಳಿ

ನಂದಿನಿ ಮಳಿಗೆಗಳ ಬಳಿ ಹಣ್ಣು, ತರಕಾರಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಬೆಂಗಳೂರು: ನಂದಿನಿ ಮಳಿಗೆಗಳ ಬಳಿ ಹಣ್ಣು, ತರಕಾರಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಮತ್ತೊಂದು ಮಹತ್ವದ ಯೋಜನೆ ರೂಪಿಸಲಾಗಿದೆ. ಹಣ್ಣು, ತರಕಾರಿ ಮಾರಾಟ ಮಾಡಲು ಆಗದೆ ತೊಂದರೆಗೆ ಈಡಾಗಿದ್ದ ರೈತರಿಗೆ ಇದು ಅನುಕೂಲ ಆಗಲಿದೆ. ಸಾಕಷ್ಟು ರೈತರು ಸ್ವತಃ ತಾವೇ ಹಣ್ಣು, ತರಕಾರಿ ಮಾರಾಟ ಮಾಡುತ್ತೇವೆ, ಆದರೆ ಸ್ಥಳಾವಕಾಶ ಇಲ್ಲ ಎಂದು ಸಾಕಷ್ಟು ಬಾರಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಂದಿನಿ ಮಳಿಗೆಗಳ ಪಕ್ಕದಲ್ಲಿ ತರಕಾರಿ, ಹಣ್ಣು ಮಾರಾಟಕ್ಕೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿತ್ತು. ಅದರಂತೆ ತೋಟಗಾರಿಕೆ ಇಲಾಖೆಯಿಂದ ಕೆಎಂಎಫ್ ಗೆ ಮನವಿ ಮಾಡಲಾಗಿತ್ತು ಎಂದು ಅವರು ತಿಳಿಸಿದರು.

ಕೆಲವು ನಂದಿನಿ ಮಳಿಗೆ ಪಕ್ಕದಲ್ಲಿ ಹಾಫ್ ಕಾಮ್ಸ್ ಮಳಿಗೆ ಇದೆ. ಅಂತಹ ಸ್ಥಳಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ರಾಜ್ಯಾದ್ಯಂತ ಕೆಎಂಎಫ್ ಹಾಗೂ 14 ಜಿಲ್ಲಾ ಹಾಲು ಒಕ್ಕೂಟ ಸೇರಿ 1500 ಕ್ಕಿಂತ ಹೆಚ್ಚು ಮಳಿಗೆಗಳಿವೆ. ರೈತರು ಈ ಸ್ಥಳಗಳಲ್ಲಿ ಹಣ್ಣು, ತರಕಾರಿಗಳನ್ನು ನೇರವಾಗಿ ಮಾರಾಟ ಮಾಡಬಹುದು. ಹೀಗೆ ಮಾರಾಟಕ್ಕೆ ಬಂದ ರೈತರಿಗೆ ಕೆಎಂಎಫ್ ವತಿಯಿಂದ ಪ್ರತಿನಿತ್ಯ ಉಚಿತವಾಗಿ ನೀರು, ಮಜ್ಜಿಗೆ, ಸ್ಯಾನಿಟೈಸರ್, ಕೈಗವಚ(ಗ್ಲೌಸ್), ಮಾಸ್ಕ್ ಗಳನ್ನ ನೀಡಲಾಗುತ್ತದೆ ಎಂದರು.

ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ಮಾರಾಟ ಮಾಡಬಹುದು. ತೂಕದ ಯಂತ್ರ ಸೇರಿದಂತೆ ಹಣ್ಣು, ತರಕಾರಿ ಮಾರಾಟಕ್ಕೆ ಬೇಕಾದ ಇತರೆ ಸಾಮಗ್ರಿಗಳನ್ನು ರೈತರೆ ತರಬೇಕು. ಮಾರಾಟಕ್ಕೆ ಬರುವ ರೈತರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಪ್ರತಿ ಹತ್ತು ಮಳಿಗೆಗೆ ಒಬ್ಬರನ್ನು ಮೇಲ್ವಿಚಾರಕರನ್ನು ನೇಮಿಸಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶವಿರೋಧಿ ಚಟುವಟಿಕೆ ಆರೋಪ: ಕಾಶ್ಮೀರ ಟೈಮ್ಸ್ ದಿನಪತ್ರಿಕೆ ಕಚೇರಿಯ SIA ದಾಳಿ; Ak-47 ಕಾರ್ಟ್ರಿಡ್ಜ್‌, ಗ್ರೆನೇಡ್ ಲಿವರ್‌ ವಶಕ್ಕೆ!

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಅಕ್ರಮ ವಲಸಿಗರಿಗೆ ಅಸ್ಸಾಂ ಸರ್ಕಾರದ 'ಶಾಕ್': 'ಅತ್ಯಪರೂಪದ ಕಾನೂನು' ಜಾರಿ, 24 ಗಂಟೆಯೊಳಗೆ ಗಡಿಪಾರು!

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!

ಭಾರತದ ಬೆನ್ನಿಗೆ ಚೂರಿ?: ದೆಹಲಿ ಬಾಂಬ್ ಸ್ಫೋಟಕ್ಕೂ ಅಫ್ಘಾನಿಸ್ತಾನಕ್ಕೂ ನಂಟು ಬಹಿರಂಗ; ಕರ್ನಾಟಕಕ್ಕೂ ಉಗ್ರನ ಭೇಟಿ!

SCROLL FOR NEXT