ಕೋವಿಡ್-19 ರೋಗಿಗಳು 
ರಾಜ್ಯ

ರಾಜ್ಯದಲ್ಲಿ ಇಂದು 9 ಹೊಸ ಕೊರೋನಾವೈರಸ್ ಪ್ರಕರಣಗಳು ಪತ್ತೆ: ಒಟ್ಟು ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ 

ರಾಜ್ಯದಲ್ಲಿ ಇಂದು ಹೊಸದಾಗಿ ಒಂಬತ್ತು ಕೊರೋನಾವೈರಸ್ ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ ಆಗಿದೆ.19 ಮಂದಿ ಮೃತಪಟ್ಟಿದ್ದು, 193 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಈ ಮಾಹಿತಿ ನೀಡಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ ಒಂಬತ್ತು ಕೊರೋನಾವೈರಸ್ ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ ಆಗಿದೆ.19 ಮಂದಿ ಮೃತಪಟ್ಟಿದ್ದು, 193 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಈ ಮಾಹಿತಿ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2, ವಿಜಯಪುರ ಜಿಲ್ಲೆಯಲ್ಲಿ 2, ಮಂಡ್ಯ ಜಿಲ್ಲೆಯಲ್ಲಿ 2, ಬಾಗಲಕೋಟೆಯಲ್ಲಿ 2 ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಒಂದು ಪ್ರಕರಣ ಇಂದು ಪತ್ತೆಯಾಗಿವೆ. 

504ನೇ ಪ್ರಕರಣದ ರೋಗಿ ಬೆಂಗಳೂರಿನ 13 ವರ್ಷದ ಹುಡುಗ ನಾಗಿದ್ದರೆ, 505ನೇ ಪ್ರಕರಣದ ರೋಗಿ ಮಂಡ್ಯ ಜಿಲ್ಲೆ ನಾಗಮಂಗಲದವರಾಗಿದ್ದಾರೆ. ಇವರಿಗೆ ಮುಂಬೈ ,ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆಯಿದೆ.506 ಹಾಗೂ 507ನೇ ಪ್ರಕರಣದ ರೋಗಿಗಳು ಕ್ರಮವಾಗಿ 45 ವರ್ಷದ ಪುರುಷ ಹಾಗೂ 80 ವರ್ಷದ ಮಹಿಳೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದಾರೆ. ಇವರಿಬ್ಬರು 432ನೇ ರೋಗಿಯೊಂದಿಗೆ ಸಂಪರ್ಕ ಹೊಂದಿದ್ಧವರಾಗಿದ್ದಾರೆ.

 508 ಹಾಗೂ 509ನೇ ಪ್ರಕರಣದ ರೋಗಿಗಳು ಬಾಗಲಕೋಟೆ ಜಿಲ್ಲೆ ಜಮಖಂಡಿಯವರಾಗಿದ್ದು, 456ನೇ ಸೋಂಕಿತನೊಂದಿಗೆ ಸಂಪರ್ಕ ಹೊಂದಿದ್ದಾರೆ. 510 ಹಾಗೂ 511ನೇ ಸೋಂಕಿತರು ವಿಜಯಪುರ ಜಿಲ್ಲೆಯವರಾಗಿದ್ದಾರೆ.510ನೇ ಸೊಂಕಿತ  221ನೇ ಸಂಖ್ಯೆಯ ರೋಗಿಯೊಂದಿಗೆ ಸಂಪರ್ಕ ಹೊಂದಿದ್ದಾರೆ. 512ನೇ ರೋಗಿ ಮಂಡ್ಯ ಜಿಲ್ಲೆ ಮಳವಳ್ಳಿಯ 22 ವರ್ಷದ ಯುವತಿಯಾಗಿದ್ದಾರೆ.ಇವರು 371ನೇ ಸಂಖ್ಯೆಯ ರೋಗಿಯೊಂದಿಗೆ ಸಂಪರ್ಕ ಹೊಂದಿದ್ದಾರೆ.ಇವರೆಲ್ಲರಿಗೂ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಮತ್ತೊಂದೆಡೆ ರಕ್ತದೊತ್ತಡ, ಕಿಡ್ನಿ ವೈಫಲ್ಯದ ಹಿನ್ನೆಲೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದ 50 ವರ್ಷದ ಬೆಂಗಳೂರಿನ ವ್ಯಕ್ತಿಯೊಬ್ಬರು ಇಂದು ನಿಧನರಾಗಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ