ರಾಜ್ಯದಲ್ಲಿ ಕೊರೋನಾ ವೈರಸ್ 
ರಾಜ್ಯ

13 ವರ್ಷದ ಬಾಲಕ ಸೇರಿ 8 ಜನರಿಗೆ ಕೊರೋನಾ ಪಾಸಿಟಿವ್, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆ

ಸೋಮವಾರ ರಾಜ್ಯದಲ್ಲಿ ಮತ್ತೆ ಎಂಟು ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ವೇಳೆ ರಾಜ್ಯದ ಒಟ್ತಾರೆ ಸೋಂಕಿತರ ಸಾಂಖ್ಯೆ 511ಕ್ಕೆ ಏರಿದೆ. 

ಬೆಂಗಳೂರು: ಸೋಮವಾರ ರಾಜ್ಯದಲ್ಲಿ ಮತ್ತೆ ಎಂಟು ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ವೇಳೆ ರಾಜ್ಯದ ಒಟ್ತಾರೆ ಸೋಂಕಿತರ ಸಾಂಖ್ಯೆ 511ಕ್ಕೆ ಏರಿದೆ.

ಬೆಂಗಳೂರು ನಗರದಲ್ಲಿ 13 ವರ್ಷದ ಬಾಲಕನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈತ ಜ್ವರದ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದನು ಎಂದು ತಿಳಿದುಬಂದಿದೆ.

ಜೊತೆಗೆ, ಮಂಡ್ಯದಲ್ಲಿ 1, ದಕ್ಷಿಣ ಕನ್ನಡದಲ್ಲಿ 2, ಬಾಗಲಕೋಟೆಯ ಜಮಖಂಡಿಯಲ್ಲಿ 2 ಹಾಗೂ ವಿಜಯಪುರದಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ.

ಮುಂಬೈಗೆ ಪ್ರಯಾಣ ಬೆಳೆಸಿದ್ದ ಇತಿಹಾಸ ಹೊಂದಿದ್ದ ಮಂಡ್ಯದ ನಾಗಮಂಗಲದ 50 ವರ್ಷದ ವ್ಯಕ್ತಿ, 432 ವರ್ಷದ ರೋಗಿಯೊಂದಿಗೆ ಸಂಪರ್ಕ ಹೊಂದಿದ್ದ ದಕ್ಷಿಣ ಕನ್ನಡ ಜಿಲ್ಲೆಯ 80 ವರ್ಷದ ಮಹಿಳೆ ಮತ್ತು 45 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. 

ಬಾಗಲಕೋಟೆಯ ಜಮಖಂಡಿಯಲ್ಲಿ 32 ಮತ್ತು 21 ವರ್ಷದ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ವಿಜಯಪುರದ 45 ಹಾಗೂ 27 ವರ್ಷದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

ಈ ನಡುವೆ, ಉಸಿರಾಟದ ತೊಂದರೆ ಹಾಗೂ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಾಗಿದ್ದ 50 ವರ್ಷದ ಬೆಂಗಳೂರು ನಿವಾಸಿ ಇಂದು ವಿಕ್ಟೋರಿಯಾ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT