ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿಯಲ್ಲಿ ಆಶಾ ಕಾರ್ಯಕರ್ತೆಗೆ ಕೊಲೆ ಬೆದರಿಕೆ; ಆರೋಪಿ ಬಂಧನ

ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದರೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ ನಂತರವೂ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸುವ ಘಟನೆಗಳು ಮುಂದುವರಿದಿವೆ

ಉಡುಪಿ: ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದರೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ ನಂತರವೂ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸುವ ಘಟನೆಗಳು ಮುಂದುವರಿದಿವೆ

ಉಡುಪಿ‌ ಜಿಲ್ಲೆಯಲ್ಲಿ ಮತ್ತೊಮ್ಮೆ‌ ಕೊರೋನಾ ವಾರಿಯರ್ಸ್‌ ಮೇಲೆ‌ ಬೆದರಿಕೆ‌ ಪ್ರಕರಣ‌ ಮರುಕಳಿಸಿದೆ.‌ ಉಡುಪಿ‌ ಜಿಲ್ಲೆಯ ಕುಂದಾಪುರ‌ ತಾಲೂಕಿನಲ್ಲಿ ಆಶಾ ಕಾರ್ಯಕರ್ತೆಯೊಬ್ಬರನ್ನು ಬೆದರಿಸಿದ ಘಟನೆ ನಡೆದಿದೆ.

ಲಾಕ್ ಡೌನ್ ನಡುವೆ ಬೆಂಗಳೂರಿಂದ ಬಂದಿರುವ ಯುವಕ ಸಂದೀಪ ಮೇಸ್ತ ಎಂಬಾತನಿಗೆ‌ ಆಶಾ ಕಾರ್ಯಕರ್ತೆ ಲಕ್ಷ್ಮೀ ಹೋಂ ಕ್ವಾರಂಟೈನ್ ವಿಧಿಸಿದ್ದರು.‌ ಆದರೆ, ಸಂದೀಪ್ ಕ್ವಾ‌ರಂಟೈನ್ ಉಲ್ಲಂಘಿಸಿ ಓಡಾಡುತ್ತಿದ್ದ. ಹೀಗಾಗಿ ಸಂದೀಪ್ ನನ್ನು ಮನೆಯಲ್ಲಿರುವಂತೆ ಸೂಚನೆ ನೀಡಿದಾಗ, ಸಂದೀಪ್‌ ಹಾಗೂ ಆತನ ಗೆಳೆಯ ಮಹೇಶ್ ಖಾರ್ವಿಯಿಂದ ಲಕ್ಷ್ಮೀ ಅವರಿಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ

ಕುಂದಾಪುರ‌ ತಾಲೂಕಿನ ಮುದ್ದುಗಡ್ಡೆಯಲ್ಲಿ ಬದುಕಲು ಬಿಡಲ್ಲ ಎಂದು ಬೆದರಿಕೆ ಒಡ್ಡಲಾಗಿದೆ. ಈ ಬಗ್ಗೆ‌ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ

ಕಳೆದ ಕೆಲ‌ ದಿನದ ಹಿಂದೆ 22ರಂದು ಉಡುಪಿ ಜಿಲ್ಲೆಯ ಪಡುಬಿದ್ರಿ ತಾಲೂಕಿನ ಉಚ್ಚಿಲದಲ್ಲಿ ಆರೋಗ್ಯ ಸಹಾಯಕಿ‌ ಶ್ಯಾಮಲಾ‌ ಅವರ ಮೇಲೆ ಹಲ್ಲೆ‌ ಯತ್ನ, ಜೀವ ಬೆದರಿಕೆ‌ ಘಟನೆ ನಡೆದಿತ್ತು.ಮಾಸ್ಕ್ ಹಾಕಿ ಅನ್ನೋ‌ ಬುದ್ದಿ ಮಾತು ಹಾಗೂ ಹೊರ‌ ಜಿಲ್ಲೆಯಿಂದ ಬರುವ ಬಗ್ಗೆ ಪ್ರಶ್ನಿಸಿದಕ್ಕೆ ಈ ಪ್ರಕರಣ ನಡೆದಿತ್ತು ವಾರಿಯರ್ಸ್‌ ಮೇಲೆ‌ ಬೆದರಿಕೆ, ಹಲ್ಲೆ ನಡೆದರೆ‌ ಕಠಿಣ‌ ಶಿಕ್ಷೆಗೆ ‌ಒಳಪಡಿಸುವುದಾಗಿ‌ ಸರ್ಕಾರ ಎಚ್ಚರಿಕೆ ನೀಡಿದ ಬೆನ್ನಲ್ಲೇ ಮತ್ತೆ ಬೆದರಿಕೆ‌ ಪ್ರಕರಣ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬರದ ನಡುವೆ ರಾಜ್ಯಕ್ಕೆ ಮತ್ತೊಂದು ಹೊರೆ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು CWRC ಆದೇಶ!

ಜಾತಿ ಆಧಾರಿತ ಮೀಸಲಾತಿ ಬೇಡ ಪೋಸ್ಟ್ ವೈರಲ್: ಈ ಕುರಿತು ನಟಿ ಶಿಲ್ಪಾ ಶೆಟ್ಟಿ ತೀಕ್ಷ್ಣ ಪ್ರತಿಕ್ರಿಯೆ!

ರಾಹುಲ್ ಗಾಂಧಿಗೆ ಮದ್ವೆ ಆಗುವಂತೆ ಮನವೊಲಿಸಿ: CJP ವೈರಲ್ ಪ್ರತಿಭಟನಾಕಾರನ ಬಳಿ ಪ್ರಿಯಾಂಕಾ ಗಾಂಧಿ ಮನವಿ!

ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್ ನಾಯಕರಲ್ಲಿ ಕ್ಷಮೆಯಾಚಿಸಿದ ಜಮೀರ್‌ ಅಹ್ಮದ್ ಖಾನ್; ಇಲ್ಲಿದೆ ಅಸಲಿ ಕಾರಣ...

NEET ಪ್ರತಿಭಟನೆ: 18 ವರ್ಷದೊಳಗಿನ ವಿದ್ಯಾರ್ಥಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ; ಸಾಕ್ಷ್ಯ ಸಂರಕ್ಷಣೆಗೆ ಸೂಚನೆ..!