ಬೆಂಗಳೂರು: ಒಂದೇ ಒಂದು ಟ್ವೀಟ್ ಸಹಾಯದಿಂದ 12 ಯುವತಿಯರ ರಕ್ಷಣೆ 
ರಾಜ್ಯ

ಬೆಂಗಳೂರು: ಒಂದೇ ಒಂದು ಟ್ವೀಟ್ ಸಹಾಯದಿಂದ 12 ಯುವತಿಯರ ರಕ್ಷಣೆ

ವಕೀಲರೊಬ್ಬರು ಮಾಡಿದ ಒಂದೇ ಒಂದು ಟ್ವೀಟ್ ನಿಂದ ಪೊಲೀಸರು 12 ಯುವತಿಯರನ್ನು ರಕ್ಷಿಸಲು ಸಾಧ್ಯವಾಗಿದೆ.

ಬೆಂಗಳೂರು: ವಕೀಲರೊಬ್ಬರು ಮಾಡಿದ ಒಂದೇ ಒಂದು ಟ್ವೀಟ್ ನಿಂದ ಪೊಲೀಸರು 12 ಯುವತಿಯರನ್ನು ರಕ್ಷಿಸಲು ಸಾಧ್ಯವಾಗಿದೆ. ಆರ್ಕೆಸ್ಟ್ರಾದಲ್ಲಿ ಅವಕಾಶ ಕಲ್ಪಿಸುವುದಾಗಿ ಹೇಳಿ ಬೇರೆ ರಾಜ್ಯದ ಯುವತಿಯರನ್ನು ನಗರಕ್ಕೆ ಕರೆ ತಂದು ವೇಶ್ಯಾವಾಟಿಕೆಗೆ ಒತ್ತಾಯಿಸಿರುವುದಾಗಿ ವರದಿಯಾಗಿದೆ. 

ಆರ್ಕೆಸ್ಟ್ರಾ ಹೆಸರಿನಲ್ಲಿ ಯುವತಿಯರನ್ನು ಕರೆತಂದಿದ್ದ ಆರೋಪಿ ಪ್ರಜ್ವಲ್, ನಿತ್ಯ ಯುವತಿಯರಿಗೆಲ್ಲ ಕಿರುಕುಳ ನೀಡುತ್ತಿದ್ದ. ಜತೆಗೆ ಲಾಕ್ ಡೌನ್ ಸಂದರ್ಭದಲ್ಲಿ ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ತನ್ನ ಸ್ನೇಹಿತನ ಬಳಿ ಹೇಳಿಕೊಂಡಿದ್ದಳು. ಈ ವಿಷಯವನ್ನು ತಿಳಿದ ಯುವತಿ ಸ್ನೇಹಿತ, ತಕ್ಷಣ ತನಗೆ ಪರಿಚಯವಿದ್ದ ವಕೀಲರೊಬ್ಬರಿಗೆ ಮಾಹಿತಿ ನೀಡಿದ್ದನು. ತದ ನಂತರ ವಕೀಲರು, ಈ ವಿಷಯವನ್ನು ಟ್ವೀಟ್‌ ಮಾಡುವ ಮೂಲಕ ನಗರ ಪೊಲೀಸರ ಗಮನಕ್ಕೆ ತಂದಿದ್ದರು. ತಕ್ಷಣವೇ ಎಚ್ಚೇತುಕೊಂಡ ಪೊಲೀಸರು ದಾಳಿ ನಡೆಸಿ, ಒಟ್ಟು 12 ಯುವತಿಯರನ್ನು ರಕ್ಷಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT