ಸಂಗ್ರಹ ಚಿತ್ರ 
ರಾಜ್ಯ

ರೌಡಿಶೀಟರ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ಮತ್ತೋರ್ವನಿಗಾಗಿ ಪೊಲೀಸರ ಹುಡುಕಾಟ

ರೌಡಿಶೀಟರ್'ನನ್ನು ಅಪಹರಿಸಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ. 

ಬೆಂಗಳೂರು: ರೌಡಿಶೀಟರ್'ನನ್ನು ಅಪಹರಿಸಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ. 

ಏಪ್ರಿಲ್ 21 ರಂದು ಪ್ರಕಾಶ್ ಎಂಬ ರೌಡಿಶೀಟರ್'ನನ್ನು ಮೂವರು ಆರೋಪಿಗಳು ಅಪಹರಿಸಿ, ಕೊಲೆ ಮಾಡಿದ್ದರು. ಬಳಿಕ ಪ್ರಕಾಶ್ ಮೃತದೇಹ ಮತ್ಕುರ್ ಎಂಬ ಗ್ರಾಮದಲ್ಲಿ ಪತ್ತೆಯಾಗಿತ್ತು. 

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು. ಇದರಂತೆ ಇದೀಗ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸುವಲ್ಲಿ ಯಶಸ್ವಿಯಾಗಿದ್ದು, ಮತ್ತೋರ್ವ ಆರೋಪಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ. 

ಹತ್ಯೆಯಾದ ಪ್ರಕಾಶ್ ಜೂಜಾಡುತ್ತಿದ್ದ ಸಂದರ್ಭದಲ್ಲಿ ಮೋಸ ಮಾಡಿ, ಪ್ರತೀಯೊಬ್ಬ ಬಳಿ ಮದ್ಯ ಕೇಳುತ್ತಿದ್ದ. ಅಲ್ಲದೆ, ಕೆಟ್ಟ ಭಾಷೆಯಲ್ಲಿ ನಿಂದಿಸುತ್ತಿದ್ದನೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೋಪಗೊಂಡು ಆತನನ್ನು ಹತ್ಯ ಮಾಡಿರುವುದಾಗಿ ಆರೋಪಿಗಳು ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT