ಮದ್ಯದಂಗಡಿ 
ರಾಜ್ಯ

ಲಾಕ್‌ಡೌನ್‌ನಿಂದಾಗಿ ಕರ್ನಾಟಕ ಅಬಕಾರಿ ಇಲಾಖೆಗೆ ಅಂದಾಜು 2,050 ಕೋಟಿ ರೂ. ನಷ್ಟ!

ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಈ ಮಧ್ಯೆ ಮಾರ್ಚ್ 24 ಲಾಕ್ ಡೌನ್ ಮಾಡಲಾಗಿದ್ದು ಮೇ 3ರವರೆಗೆ ಮುಂದುವರೆಯಲಿದ್ದು ಕರ್ನಾಟಕದ ಮದ್ಯದಂಗಡಿಗಳನ್ನು ಬಂದ್ ಮಾಡಿರುವುದರಿಂದ ಈ ಅವಧಿಯಲ್ಲಿ ರಾಜ್ಯ ಅಬಕಾರಿ ಇಲಾಖೆಗೆ ಅಂದಾಜು 2,050 ಕೋಟಿ ರೂ. ನಷ್ಟವಾಗಿದೆ.

ಬೆಂಗಳೂರು: ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಈ ಮಧ್ಯೆ ಮಾರ್ಚ್ 24 ಲಾಕ್ ಡೌನ್ ಮಾಡಲಾಗಿದ್ದು ಮೇ 3ರವರೆಗೆ ಮುಂದುವರೆಯಲಿದ್ದು ಕರ್ನಾಟಕದ ಮದ್ಯದಂಗಡಿಗಳನ್ನು ಬಂದ್ ಮಾಡಿರುವುದರಿಂದ ಈ ಅವಧಿಯಲ್ಲಿ ರಾಜ್ಯ ಅಬಕಾರಿ ಇಲಾಖೆಗೆ ಅಂದಾಜು 2,050 ಕೋಟಿ ರೂ. ನಷ್ಟವಾಗಿದೆ.

ದಿನವೊಂದಕ್ಕೆ ಸುಮಾರು 50 ಕೋಟಿ ರುಪಾಯಿ ನಷ್ಟವಾಗುತ್ತಿದ್ದು ಇನ್ನು 41 ದಿನಕ್ಕೆ ಹೋಲಿಸಿದರೆ ಸರಾಸರಿ ಅಂದಾಜು 2,050 ಕೋಟಿ ರುಪಾಯಿ ನಷ್ಟವಾಗಿದೆ ಎಂದು ಹಿರಿಯ ಅಬಕಾರಿ ಅಧಿಕಾರಿ ಸುದ್ದಿ ಸಂಸ್ಥೆಯೊಂದಕ್ಕೆ ಮಾಹಿತಿ ನೀಡಿದ್ದಾರೆ. 

ಮೇ 3ರ ನಂತರ ಮದ್ಯದಂಗಡಿಗಳನ್ನು ತೆರೆಯಲಾಗುತ್ತದೆಯೋ ಎಂಬ ಬಗ್ಗೆ ಇನ್ನು ಸ್ಪಷ್ಟತೆ ಇಲ್ಲ. ಲಾಕ್ ಡೌನ್ ತೆರೆದ ನಂತರ ಮದ್ಯದಂಗಡಿ ತೆರೆಯುವ ಸಾಧ್ಯತೆಯಿದೆ. ಇನ್ನು ರಾಜ್ಯ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ. 

ಅಬಕಾರಿ ಇಲಾಖೆಯ ವೆಬ್‌ಸೈಟ್‌ನ ಪ್ರಕಾರ, 2016-17ರ ಆರ್ಥಿಕ ವರ್ಷದಲ್ಲಿ ಏಪ್ರಿಲ್‌ನಲ್ಲಿ 1,003.21 ಕೋಟಿ ರೂ., 2017-18ರಲ್ಲಿ 997.55 ಕೋಟಿ ರೂ., ಮತ್ತು 2018-19ರಲ್ಲಿ 1,334.47 ಕೋಟಿ ರೂ. ಆದಾಯ ಬಂದಿತ್ತು. 

ಮಾರ್ಚ್ 27 ರಿಂದ ಏಪ್ರಿಲ್ 27ರವರೆಗೆ ರಾಜ್ಯಾದ್ಯಂತ 20,449 ದಾಳಿಗಳನ್ನು ನಡೆಸಲಾಗಿತ್ತು. ಈ ವೇಳೆ 77,305 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ 40,852 ಲೀಟರ್ ಇಂಡಿಯಾ ಮೇಡ್ ಫಾರಿನ್ ಲಿಕ್ಕರ್(ಐಎಂಎಫ್ಎಲ್), 24,340 ಲೀಟರ್ ಬಿಯರ್, 2,938 ಲೀಟರ್ ತೊಗರಿ ಮತ್ತು 1,777 ಲೀಟರ್ ವೈನ್ ಸೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT