ಸಚಿನ್ ಸಾವಂತ್ 
ರಾಜ್ಯ

ಚಿಕ್ಕೋಡಿ: ಯೋಧ ಸಚಿನ್ ಸಾವಂತ್‍ಗೆ ಠಾಣೆಯಲ್ಲಿ ಅಮಾನುಷ ಥಳಿತ, ಇಲ್ಲಿದೆ ಫೋಟೋಗಳು!

ಮನೆ ಮುಂದೆ ಬೈಕ್ ತೊಳೆಯುತ್ತಿದ್ದ ಯೋಧ ಸಚಿನ್ ಸಾವಂತ್ ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಪೊಲೀಸರು ಪ್ರಶ್ನಿಸಿದ್ದರು. ಈ ವೇಳೆ ಮಾತಿನ ಚಕಮಿಕಿ ನಡೆದು ನಂತರ ಪೊಲೀಸರು ಹಲ್ಲೆ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಯೋಧ ಸಹ ಹೊಡೆದಿದ್ದರು.

ಚಿಕ್ಕೋಡಿ: ಮನೆ ಮುಂದೆ ಬೈಕ್ ತೊಳೆಯುತ್ತಿದ್ದ ಯೋಧ ಸಚಿನ್ ಸಾವಂತ್ ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಪೊಲೀಸರು ಪ್ರಶ್ನಿಸಿದ್ದರು. ಈ ವೇಳೆ ಮಾತಿನ ಚಕಮಿಕಿ ನಡೆದು ನಂತರ ಪೊಲೀಸರು ಹಲ್ಲೆ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಯೋಧ ಸಹ ಹೊಡೆದಿದ್ದರು. ಈ ಸಂಬಂಧ ಬೆಳಗಾವಿ ಪೊಲೀಸರು ಸಚಿನ್ ರನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದರು. 

ಇದಾದ ಐದು ದಿನಗಳ ನಂತರ ಸಚಿನ್ ಅವರಿಗೆ ಜಾಮೀನು ಸಿಕ್ಕಿತ್ತು. ಅದಕ್ಕೆ ಕಾರಣ ಯೋಧನ ಕೈಗೆ ಕೋಳ ತೊಡಿಸಿ ಜೈಲಿನಲ್ಲಿ ಕೂರಿಸಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಇದೇ ವೇಳೆ ಪೊಲೀಸರು ಕ್ರಮವನ್ನು ತೀವ್ರವಾಗಿ ಖಂಡಿಸಲಾಗಿತ್ತು. 

ಇದೀಗ ಜಾಮೀನು ಪಡೆದು ಹೊರಬಂದಿರುವ ಸಚಿನ್ ಅವರನ್ನು ಠಾಣೆಯಲ್ಲಿ ಅಮಾನುಷವಾಗಿ ಥಳಿಸಲಾಗಿದೆ ಎಂಬ ಪೋಸ್ಟ್ ವೊಂದು ವೈರಲ್ ಆಗಿದೆ. ಮಿತಾಂಶು ಚೌಧರಿ ಎಂಬುವವರು ಸಚಿನ್ ಸಾವಂತ್ ಅವರ ಎರಡು ಫೋಟೋಗಳನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಕೋಬ್ರಾ ಕಮಾಂಡೋ ಸಚಿನ್ ಗೆ 15 ಮಂದಿ ಪೊಲೀಸರು ಠಾಣೆಯಲ್ಲಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 

ಇನ್ನು ಹಲ್ಲೆ ಕುರಿತಂತೆ ನ್ಯಾಯಾಧೀಶರ ಮುಂದೆ ಹೇಳಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದರು. ಇದರಿಂದ ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂದು ಹೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ಸಾವಂತ್ ಅವರ ದೇಹದ ಮೇಲೆ ರಕ್ತ ಹೆಪ್ಪುಗಟ್ಟಿರುವ ಫೋಟೋಗಳನ್ನು ಟ್ವೀಟರ್ ನಲ್ಲಿ ಹಾಕಲಾಗಿದ್ದು ಬೆಳಗಾವಿ ಪೊಲೀಸರ ನಡೆಯನ್ನು ಖಂಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT