ಮದ್ಯದಂಗಡಿ 
ರಾಜ್ಯ

ಮೇ 4ರ ನಂತರ ಪಾರ್ಸೆಲ್ ತೆಗೆದುಕೊಂಡು ಹೋಗಲು ಅನುಮತಿ ನೀಡಿ: ಸಿಎಂಗೆ ಮದ್ಯ ಮಾರಾಟಗಾರರ ಮನವಿ

ಮೇ 4ರ ನಂತರ ಕೆಲವು ಮದ್ಯದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಬೇಕು ಎಂದು ವೈನ್ ಮಾರಾಟಗಾರರ ಒಕ್ಕೂಟ ಗುರುವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ.

ಬೆಂಗಳೂರು: ಮೇ 4ರ ನಂತರ ಕೆಲವು ಮದ್ಯದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಬೇಕು ಎಂದು ವೈನ್ ಮಾರಾಟಗಾರರ ಒಕ್ಕೂಟ ಗುರುವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ.

ಎಲ್ಲಾ ಮದ್ಯದ ಅಂಗಡಿಗಳಲ್ಲಿ ಭಾರಿ ಪ್ರಮಾಣದ ಬಿಯರ್ ಸ್ಟಾಕ್ ಇದೆ. ಒಂದು ವೇಳೆ ಮೇ 4ರ ನಂತರ ಬಿಯರ್ ಮಾರಾಟಕ್ಕೆ ಅನುಮತಿ ನೀಡದಿದ್ದರೆ ಆ ಎಲ್ಲಾ ಬಿಯರ್ ಅನ್ನು ಸುಟ್ಟು ಹಾಕಬೇಕಾಗುತ್ತದೆ. ಬಿಯರ್ ಅನ್ನು ತಯಾರಾದ ದಿನದಿಂದ ಆರು ತಿಂಗಳಲ್ಲಿ ಮಾತ್ರ ಉಪಯೋಗಿಸಬೇಕು ಎಂದು ವೈನ್ ಒಕ್ಕೂಟ ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಈಗಾಗಲೇ ನಾಲ್ಕು ತಿಂಗಳಿಂದ ಬಿಯರ್ ಸ್ಟಾಕ್ ಇದೆ. ಈಗ ಬೇಸಿಗೆ ಇರುವುದರಿಂದ ಮತ್ತು ಉಷ್ಣಾಂಶ ಹೆಚ್ಚಾಗಿರುವುದರಿಂದ ಬಿಯರ್ ಹಾಳಾಗಿರುವ ಸಾಧ್ಯತೆ ಇದೆ ಎಂದು ವೈನ್ ಒಕ್ಕೂಟದ ಕಾರ್ಯದರ್ಶಿ ಗೋವಿಂದರಾಜ್ ಹೆಗಡೆ ಅವರು ಹೇಳಿದ್ದಾರೆ.

ಈ ಸಂಬಂಧ ನಾವು ಇಂದು ಮುಖ್ಯಮಂತ್ರಿಗಳಿಗೆ ಇ-ಮೇಲ್ ಮಾಡಿದ್ದು, ಮೇ 4ರ ನಂತರ ಬೆಳಗ್ಗೆ 9ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮದ್ಯವನ್ನು ಪಾರ್ಸಲ್ ತೆಗೆದುಕೊಂಡು ಹೋಗಲು ಅನುಮತಿ ನೀಡಬೇಕು. ಮದ್ಯದ ಅಂಗಡಿ ತೆರೆಯಲು ಅನುಮತಿ ನೀಡದಿರುವುದರಿಂದ ರಾಜ್ಯ ಸರ್ಕಾರಕ್ಕೂ ಸುಮಾರು 60 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಗೋವಿಂದರಾಜು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

KPCC ಅಧ್ಯಕ್ಷರಾಗಿ ಆರು ವರ್ಷ: ಡಿ ಕೆ ಶಿವಕುಮಾರ್ ಔತಣಕೂಟ ಆಯೋಜನೆ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ, ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

No friendship only business: ತೈಲ ಬೇಕಾದರೆ..; ಸಂಕಷ್ಟದ ಸಮಯದಲ್ಲಿ ಕೈಹಿಡಿದಿದ್ದ ಭಾರತಕ್ಕೆ ಕೈ ಕೊಟ್ಟ ರಷ್ಯಾ!

1998-2025ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳಲ್ಲಿ ಸಿದ್ದರಾಮಯ್ಯನೇ ಹೆಚ್ಚು ಸಾಲ ಮಾಡಿದ್ದಾರೆ: ಆರ್.ಅಶೋಕ್

ಆತ ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ; ಪ್ರಿಯಾಂಕಾ ಉತ್ತಮ ವಿಪಕ್ಷ ನಾಯಕಿಯಾಗಬಹುದು: ರಾಹುಲ್ ವಿರುದ್ಧ ಕಿರಣ್ ರಿಜಿಜು ಟೀಕಾ ಪ್ರಹಾರ

SCROLL FOR NEXT