ಸಾಂದರ್ಭಿಕ ಚಿತ್ರ 
ರಾಜ್ಯ

'ಸಾರಿ' ಆರೋಗ್ಯ ಸಮೀಕ್ಷೆಗೆ ನಿಯೋಜನೆ: ಶಿಕ್ಷಕರ ಆತಂಕ

ನಿರ್ದಿಷ್ಟವಾದಂತಹ  ಆರೋಗ್ಯ ಸಮೀಕ್ಷೆಯನ್ನು ನಡೆಸಲು ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ. ಇದಕ್ಕೆ ಶಿಕ್ಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ನಿರ್ದಿಷ್ಟವಾದಂತಹ  ಆರೋಗ್ಯ ಸಮೀಕ್ಷೆಯನ್ನು ನಡೆಸಲು ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ.ಇದಕ್ಕಾಗಿ ಬುಧವಾರ ಅರ್ಜಿ ಕರೆಯಲಾಗಿದೆ.ಕೋವಿಡ್ -19 ನಿಂದ ಉಂಟಾಗುವ ಮತ್ತಷ್ಟು ಆರೋಗ್ಯ ಸಮಸ್ಯೆಗಳನ್ನು ತಡೆಯಲು ವಿಎಲ್ ಐ ( ಶೀತಜ್ವರ) ಸಾರಿ (ತೀವ್ರವಾದ ಉಸಿರಾಟದ ಸೋಂಕು) ಮತ್ತಿತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರನ್ನು ಮುಂಚಿತವಾಗಿ ಗುರುತಿಸಲು ಕುಟುಂಬಗಳ ಸಮೀಕ್ಷೆಯನ್ನು ರಾಜ್ಯಾದ್ಯಂತ ನಡೆಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ. 

ಆದರೆ, ಶಿಕ್ಷಕರು ತಮ್ಮ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮಾಸ್ಕ್ ಗಳು, ಗ್ಲೌಸುಗಳನ್ನು ನೀಡಿದ್ದರೂ ನಮ್ಮಲಿ ಸರ್ವೆ ಮಾಡಲು ಭಯವಿದೆ, ಸೋಂಕನ್ನು ತಡೆಯುವ ತಾಂತ್ರಿಕ ಜ್ಞಾನವನ್ನು ಹೊಂದಿರದ ಕಾರಣ ಶಿಕ್ಷಕರಿಗೆ ಕೆಂಪು ವಲಯಗಳಲ್ಲಿ  ಸರ್ವೆಗಳಿಗೆ ನಿಯೋಜಿಸಬಾರದು ಎಂದು  ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಯೊಬ್ಬರು ಹೇಳುತ್ತಾರೆ. 

ಆರೋಗ್ಯ ಕಾರ್ಯಕರ್ತರಿಗೆ ಒದಗಿಸುವಂತೆ ಶಿಕ್ಷಕರಿಗೂ ಸರ್ಕಾರ ವಿಮೆ ಸೌಲಭ್ಯ ಒದಗಿಸಬೇಕೆಂದು  ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ ಒತ್ತಾಯಿಸಿದ್ದಾರೆ.

ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಶಿಕ್ಷಣ ತಜ್ಞ ನಿರಂಜನಾರಾಧ್ಯ,  ಶಿಕ್ಷಕರನ್ನು ಪರೀಕ್ಷಿಸದ ಕಾರಣ, ಮನೆಗಳಿಗೆ ಭೇಟಿ ನೀಡುವಂತೆ ಕೇಳಿಕೊಳ್ಳುವುದು ಸೋಂಕಿನ ಅಪಾಯವನ್ನು ಹೆಚ್ಚಿಸುತ್ತದೆ  ಸುತ್ತೋಲೆಯ ಪ್ರಕಾರ, ಮತದಾನ ಅಧಿಕಾರಿಗಳಾಗಿ ಕೆಲಸ ಮಾಡಿದ ಶಿಕ್ಷಕರು ಇದರಲ್ಲಿ ಮತ್ತೆ ಕೆಲಸ ಮಾಡುತ್ತಾರೆ. ಮೇ 3 ರ ಗಡುವು ನಿಗದಿಪಡಿಸಲಾಗಿದೆ. ಉಪ ನಿರ್ದೇಶಕರು (ಆಡಳಿತ) ಮತ್ತು ಬಿಇಒಗಳನ್ನು ಡಿಸಿಗಳ ಮಾರ್ಗದರ್ಶನದಲ್ಲಿ ಕೆಲಸ ಮಾಡಲು ನಿರ್ದೇಶಿಸಲಾಗಿದೆ. ಮೊಬೈಲ್ ಅಪ್ಲಿಕೇಶನ್ ‘ಹೆಲ್ತ್ ವಾಚ್’ ಸ್ಥಳದಲ್ಲೇ ಮಾಹಿತಿಯನ್ನು ಅಪ್‌ಲೋಡ್ ಮಾಡಲು ಅವಕಾಶ ಮಾಡಿಕೊಡಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!