ಮಕ್ಕಳಿಗಾಗಿ ಟಿವಿ ಖರೀದಿಸಿದ ಮಹಿಳೆ 
ರಾಜ್ಯ

ಮಕ್ಕಳ ಆನ್ ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿ ಟಿವಿ ಖರೀದಿಸಿದ ಗದಗದ ಮಹಿಳೆ

ಮನೆಯಲ್ಲಿ ಟಿವಿ ಇಲ್ಲದ ಕಾರಣ ಮಹಿಳೆಯೊಬ್ಬರು ಚಿನ್ನದ ತಾಳಿಯನ್ನು ಅಡವಿಟ್ಟು ಟಿವಿ ಖರೀದಿಸಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ರೆಡ್ಡೇರ ನಾಗನೂರ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಕಸ್ತೂರಿ ಛಲವಾದಿ ಅವರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಕನಸು ಹೊತ್ತಿದ್ದಾರೆ.

ಗದಗ: ಕೊರೋನಾ ಲಾಕ್ ಡೌನ್ ಕಾರಣದಿಂದ ಶಾಲೆಗಳು ಆರಂಭವಾಗಿಲ್ಲ. ಹಾಗಾಗಿ ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಚಂದನ ವಾಹಿನಿಯಲ್ಲಿ ಶಿಕ್ಷಣ ನೀಡಲಾಗುತ್ತಿದೆ.

ಆದರೆ ಮನೆಯಲ್ಲಿ ಟಿವಿ ಇಲ್ಲದ ಕಾರಣ ಮಹಿಳೆಯೊಬ್ಬರು ಚಿನ್ನದ ತಾಳಿಯನ್ನು ಅಡವಿಟ್ಟು ಟಿವಿ ಖರೀದಿಸಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ರೆಡ್ಡೇರ ನಾಗನೂರ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಕಸ್ತೂರಿ ಛಲವಾದಿ ಅವರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಕನಸು ಹೊತ್ತಿದ್ದಾರೆ.

ಅವರ ಇಬ್ಬರು ಮಕ್ಕಳು 7 ಮತ್ತು 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು  ಮಕ್ಕಳಿಗೆ ಅನುಕೂಲವಾಗುವಂತೆ ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ಪಾಠಗಳನ್ನು ಕೇಳಲು ಟಿವಿ ಖರೀದಿಸಿದ್ದಾರೆ. ಇವರ ಮನೆಯಲ್ಲಿ ಟಿವಿ ಇಲ್ಲದ ಕಾರಣ ಮಕ್ಕಳ ಕಲಿಕೆಗೆ ತೊಂದರೆಯಾಗಿತ್ತು. ಶಿಕ್ಷಕರು ಕರೆಮಾಡಿ ಟಿವಿ ನೋಡುವಂತೆ ತಿಳಿಸುತ್ತಿದ್ದರು. ಪಾಠಗಳ ಬಗ್ಗೆ ಮಾಹಿತಿ ನೀಡುತ್ತಿದ್ದರು. ಆದರೆ ಟಿವಿ ಇಲ್ಲದ ಕಾರಣ ಮಕ್ಕಳಿಗೆ ಕಲಿಯಲು ಸಾಧ್ಯವಾಗಿರಲಿಲ್ಲ. ಇದರಿಂದ ಕಸ್ತೂರಿ ತಾಳಿ ಮಾರಿ ಮಕ್ಕಳ ಅನುಕೂಲಕ್ಕಾಗಿ ಟಿವಿ ತಂದಿದ್ದಾರೆ.

20 ಸಾವಿರ ರೂಪಾಯಿಗೆ ಮಂಗಳ ಸೂತ್ರ ಮಾರಿ 14 ಸಾವಿರ ರು ಬೆಲೆಯ ಟಿವಿ ಖರೀದಿಸಿದ್ದಾರೆ. ಲಾಕ್ ಡೌನ್ ನಂತರವೂ ನಮಗೆ ಸರಿಯಾಗಿ ಕೂಲಿ ಕೆಲಸ ಸಿಗುತ್ತಿಲ್ಲ, ಹೀಗಾಗಿ ಉಳಿತಾಯ ಮಾಡಿದ್ದ ಹಣದಲ್ಲಿ ದೈನಂದಿನ ಜೀವನ ನಡೆಯುತ್ತಿದೆ. ಆದರೆ ಮಕ್ಕಳ ಶಾಲಾ ಭವಿಷ್ಯವೂ ಮುಖ್ಯವಾಗಿರುವ ಕಾರಣ ನನ್ನ ಮಂಗಳ ಸೂತ್ರ ಮಾರಿದ್ದಾಗಿ ತಿಳಿಸಿದ್ದಾರೆ.

ನನ್ನ ಮಕ್ಕಳನ್ನು ಉತ್ತಮ ಅಧಿಕಾರಿಳನ್ನಾಗಿ ಮಾಡುವ ಆಸೆಯಿದೆ. ಟಿವಿಯಲ್ಲಿ ಅವರು ಪಾಠಗಳನ್ನು ಕಲಿಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT