ಮಕ್ಕಳಿಗಾಗಿ ಟಿವಿ ಖರೀದಿಸಿದ ಮಹಿಳೆ 
ರಾಜ್ಯ

ಮಕ್ಕಳ ಆನ್ ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿ ಟಿವಿ ಖರೀದಿಸಿದ ಗದಗದ ಮಹಿಳೆ

ಮನೆಯಲ್ಲಿ ಟಿವಿ ಇಲ್ಲದ ಕಾರಣ ಮಹಿಳೆಯೊಬ್ಬರು ಚಿನ್ನದ ತಾಳಿಯನ್ನು ಅಡವಿಟ್ಟು ಟಿವಿ ಖರೀದಿಸಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ರೆಡ್ಡೇರ ನಾಗನೂರ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಕಸ್ತೂರಿ ಛಲವಾದಿ ಅವರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಕನಸು ಹೊತ್ತಿದ್ದಾರೆ.

ಗದಗ: ಕೊರೋನಾ ಲಾಕ್ ಡೌನ್ ಕಾರಣದಿಂದ ಶಾಲೆಗಳು ಆರಂಭವಾಗಿಲ್ಲ. ಹಾಗಾಗಿ ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಚಂದನ ವಾಹಿನಿಯಲ್ಲಿ ಶಿಕ್ಷಣ ನೀಡಲಾಗುತ್ತಿದೆ.

ಆದರೆ ಮನೆಯಲ್ಲಿ ಟಿವಿ ಇಲ್ಲದ ಕಾರಣ ಮಹಿಳೆಯೊಬ್ಬರು ಚಿನ್ನದ ತಾಳಿಯನ್ನು ಅಡವಿಟ್ಟು ಟಿವಿ ಖರೀದಿಸಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ರೆಡ್ಡೇರ ನಾಗನೂರ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಕಸ್ತೂರಿ ಛಲವಾದಿ ಅವರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಕನಸು ಹೊತ್ತಿದ್ದಾರೆ.

ಅವರ ಇಬ್ಬರು ಮಕ್ಕಳು 7 ಮತ್ತು 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು  ಮಕ್ಕಳಿಗೆ ಅನುಕೂಲವಾಗುವಂತೆ ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ಪಾಠಗಳನ್ನು ಕೇಳಲು ಟಿವಿ ಖರೀದಿಸಿದ್ದಾರೆ. ಇವರ ಮನೆಯಲ್ಲಿ ಟಿವಿ ಇಲ್ಲದ ಕಾರಣ ಮಕ್ಕಳ ಕಲಿಕೆಗೆ ತೊಂದರೆಯಾಗಿತ್ತು. ಶಿಕ್ಷಕರು ಕರೆಮಾಡಿ ಟಿವಿ ನೋಡುವಂತೆ ತಿಳಿಸುತ್ತಿದ್ದರು. ಪಾಠಗಳ ಬಗ್ಗೆ ಮಾಹಿತಿ ನೀಡುತ್ತಿದ್ದರು. ಆದರೆ ಟಿವಿ ಇಲ್ಲದ ಕಾರಣ ಮಕ್ಕಳಿಗೆ ಕಲಿಯಲು ಸಾಧ್ಯವಾಗಿರಲಿಲ್ಲ. ಇದರಿಂದ ಕಸ್ತೂರಿ ತಾಳಿ ಮಾರಿ ಮಕ್ಕಳ ಅನುಕೂಲಕ್ಕಾಗಿ ಟಿವಿ ತಂದಿದ್ದಾರೆ.

20 ಸಾವಿರ ರೂಪಾಯಿಗೆ ಮಂಗಳ ಸೂತ್ರ ಮಾರಿ 14 ಸಾವಿರ ರು ಬೆಲೆಯ ಟಿವಿ ಖರೀದಿಸಿದ್ದಾರೆ. ಲಾಕ್ ಡೌನ್ ನಂತರವೂ ನಮಗೆ ಸರಿಯಾಗಿ ಕೂಲಿ ಕೆಲಸ ಸಿಗುತ್ತಿಲ್ಲ, ಹೀಗಾಗಿ ಉಳಿತಾಯ ಮಾಡಿದ್ದ ಹಣದಲ್ಲಿ ದೈನಂದಿನ ಜೀವನ ನಡೆಯುತ್ತಿದೆ. ಆದರೆ ಮಕ್ಕಳ ಶಾಲಾ ಭವಿಷ್ಯವೂ ಮುಖ್ಯವಾಗಿರುವ ಕಾರಣ ನನ್ನ ಮಂಗಳ ಸೂತ್ರ ಮಾರಿದ್ದಾಗಿ ತಿಳಿಸಿದ್ದಾರೆ.

ನನ್ನ ಮಕ್ಕಳನ್ನು ಉತ್ತಮ ಅಧಿಕಾರಿಳನ್ನಾಗಿ ಮಾಡುವ ಆಸೆಯಿದೆ. ಟಿವಿಯಲ್ಲಿ ಅವರು ಪಾಠಗಳನ್ನು ಕಲಿಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT