ವಜುಬಾಯಿ ವಾಲಾ 
ರಾಜ್ಯ

ಕಾರ್ಮಿಕ ವ್ಯಾಜ್ಯಗಳ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ

ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಕೈಗಾರಿಕಾ ವ್ಯಾಜ್ಯ ಗಳ ಕಾಯ್ದೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸುಗ್ರಿವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಒಪ್ಪಿಗೆ ನೀಡಿದ್ದಾರೆ. ಈ ಕಾಯ್ದೆ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನ ಕೈಗೊಂಡಿತ್ತು.

ಬೆಂಗಳೂರು: ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಕೈಗಾರಿಕಾ ವ್ಯಾಜ್ಯ ಗಳ ಕಾಯ್ದೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸುಗ್ರಿವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಒಪ್ಪಿಗೆ ನೀಡಿದ್ದಾರೆ. ಈ ಕಾಯ್ದೆ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನ ಕೈಗೊಂಡಿತ್ತು.

ರಾಜ್ಯದಲ್ಲಿ ಕಾರ್ಮಿಕರು ಮತ್ತು ಕಾರ್ಖಾನೆ ಮಾಲಿಕರ ನಡುವಿನ ವ್ಯಾಜ್ಯಗಳನ್ನು ಕಡಿಮೆ ಮಾಡಿ ಸುಗಮ ಆಡಳಿತ ನಡೆಸಲು ಅನುಕೂಲವಾಗುಂತೆ ಕೈಗಾರಿಕೆಗಳ ವಿವಾದಗಳ ಅಧಿನಿಯಮ 1947, ಕಾರ್ಖಾನೆಗಳ ಅಧಿನಿಯಮ 1948, ಗುತ್ತಿಗೆ ಕಾರ್ಮಿಕರ ಅಧಿನಿಯಮ 1970 ಕ್ಕೆ ತಿದ್ದುಪಡಿ ಮಾಡಿ ಸುಗ್ರೀ ವಾಜ್ಞೆ ಹೊರಡಿಸಲಾಗಿದೆ.

ಕಾರ್ಮಿಕ ಸಂಘಟನೆಗಳು, ವಿರೋಧ ಪಕ್ಷಗಳ ತೀವ್ರ ವಿರೋಧದ ಮಧ್ಯೆಯೂ ರಾಜ್ಯ ಸರ್ಕಾರ ಹೊರಡಿಸಿದ್ದ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ ತಿದ್ದುಪಡಿ ಸುಗ್ರಿವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂಕಿತ ಹಾಕಿದ್ದಾರೆ. 

ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ನಷ್ಟ ಅನುಭವಿಸುತ್ತಿದ್ದ ಕಾರ್ಖಾನೆ ಮಾಲಿಕರು ಉತ್ತರ ಪ್ರದೇಶದ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಕಾಯ್ದೆಗೆ ತಿದ್ದುಪಡಿ ತರುವಂತೆ ಮನವಿ ಮಾಡಿದ್ದರು. ಕೇಂದ್ರ ಸರ್ಕಾರ ಕೂಡ ಕಾರ್ಮಿಕ ಖಾಯ್ದೆಗೆ ತಿದ್ದುಪಡಿ ತರುವಂತೆ ಸೂಚಿಸಿತ್ತು. ಅದರಂತೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ಮಾಡಿದೆ. ಹೊಸ ತಿದ್ದುಪಡಿ ಕಾಯ್ದೆ ಪ್ರಕಾರ ವಿದ್ಯುತ್ ಸೌಲಭ್ಯದ ಜತೆಗೆ ಕನಿಷ್ಠ 10 ಕಾರ್ಮಿಕರಿರುವ ಕಾರ್ಖಾನೆಯ ಬದಲು 20 ಕಾರ್ಮಿಕರಿರುವುದನ್ನು ಕಾರ್ಖಾನೆ ವ್ಯಾಪ್ತಿಯಿಂದ ಹೊರಗಿಡಲಾಗಿದೆ. 

ಸದ್ಯ ಇರುವ ಕಾಯ್ದೆ ಪ್ರಕಾರ ನೂರಕ್ಕೂ ಹೆಚ್ಚು ಕಾರ್ಮಿಕರಿರುವ ಕಾರ್ಖಾನೆ ಮುಚ್ಚುವುದಾದರೆ ಸರ್ಕಾರದ ಅನುಮತಿ ಪಡೆಯಬೇಕು. ಈ ಮಿತಿಯನ್ನು ನೂರರಿಂದ 300ಕ್ಕೆ ಹೆಚ್ಚಳ ಮಾಡಲಾಗಿದೆ. ಇನ್ನು ಹೆಚ್ಚುವರಿ ಕೆಲಸದ ಅವಧಿಯನ್ನು 75 ಗಂಟೆಗಳಿಂದ 125 ಗಂಟೆಗಳಿಗೆ ಹೆಚ್ಚಿಸಲು ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಇದರೊಂದಿಗೆ ಟೌನ್ ಆ್ಯಂಡ್ ಕಂಟ್ರಿ ಪ್ಲ್ಯಾನಿಂಗ್ ಕಾಯ್ದೆಗೂ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲಾಗಿದ್ದು ಕಾಯ್ದೆಗೆ 18 ಬಿ ಯನ್ನು ಹೊಸದಾಗಿ ಸೇರಿಸಲಾಗಿದ್ದು, ಮೆಟ್ರೊ ಮಾರ್ಗದ ಎರಡೂ ಬದಿಗೆ ಫ್ರಿಮಿಯಂ ಎಫ್.ಎ ಆರ್ ದರವನ್ನು ನಿಗದಿ ಪಡಿಸಲು ತಿದ್ದುಪಡಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಈ ರೀತಿಯ ಮಾದರಿ ಮುಂಬೈನಲ್ಲಿದೆ. ಅದೆ ಮಾದರಿಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ  ಕಾನೂನು ತಿದ್ದುಪಡಿ ಮಾಡಿದ್ದು, ಈ ಕಾಯ್ದೆಗೂ ರಾಜ್ಯಪಾಲರು ಅನುಮತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT