ಕೆಸಿ ಜನರಲ್ ಆಸ್ಪತ್ರೆ 
ರಾಜ್ಯ

ಕೊರೋನಾ ಎಫೆಕ್ಟ್: ಕೆಸಿ ಜನರಲ್ ಆಸ್ಪತ್ರೆಯ ಐಸಿಯು ಬೆಡ್ ಗಳ ಸಂಖ್ಯೆ 6 ರಿಂದ 100ಕ್ಕೆ ಏರಿಕೆ

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ನಗರದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 100 ಐಸಿಯು ಹಾಸಿಗೆಗಳಿಗೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.

ಬೆಂಗಳೂರು: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ನಗರದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 100 ಐಸಿಯು ಹಾಸಿಗೆಗಳಿಗೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ.

ಈ ಹಿಂದೆ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಹೆಚ್ಚುವರಿಯಾಗಿ 100 ಐಸಿಯು ಹಾಸಿಗೆಗಳಿಗೆ ವ್ಯವಸ್ಥೆ ಮಾಡುವ ಕುರಿತು ಭರವಸೆ ನೀಡಿದ್ದರು. ಪ್ರಸ್ತುತ ಈ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ 4 ಹಾಸಿಗೆಗಳಿದ್ದು ಕೂಡಲೇ ಅವುಗಳ ಸಂಖ್ಯೆಯನ್ನು 100ಕ್ಕೆ ಹೆಚ್ಚಿಸಲಾಗುತ್ತಿದೆ. 

ಈ ಬಗ್ಗೆ ಮಾಹಿತಿ ನೀಡಿರುವ ಕೆಸಿ ಜನರಲ್ ಆಸ್ಪತ್ರೆ ಆಡಳಿತ ಮಂಡಳಿ ಪ್ರಸ್ತುತ ಆಸ್ಪತ್ರೆಯಲ್ಲಿ ಆರು ಬೆಡ್ ಗಳ ಐಸಿಯು ಕೊಠಡಿಯಿದ್ದು ಈ ಸಂಖ್ಯೆಯನ್ನು 100 ಬೆಡ್ ಗಳಿಗೆ ಏರಿಕೆ ಮಾಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಪಕ್ಕದ ಆಸ್ಪತ್ರೆ ಕ್ಯಾಂಪಸ್ ನಲ್ಲಿರುವ ಐಪಿಪಿ ಬಿಲ್ಡಿಂಗ್ ಅನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಇಲ್ಲಿ 50 ಐಸಿಯು  ಬೆಡ್ ಗಳು ಮತ್ತು 50 ಮೊಬೈಲ್ ಐಸಿಯು ಕಂಟೈನರ್ ಗಳನ್ನು ಸಿದ್ಧಪಡಿಸಲಾಗುತ್ತದೆ. ಕಟ್ಟಡದ ಪಾರ್ಕಿಂಗ್ ಪ್ರದೇಶವನ್ನೂ ಕೂಡ ಚಿಕಿತ್ಸೆಗೆ ಬಳಕೆ ಮಾಡಿಕೊಳ್ಳಬಹುದು ಎಂದು ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಬಿ ಆರ್ ವೆಂಕಟೇಶಯ್ಯ ಅವರು ಹೇಳಿದ್ದಾರೆ.

ಅಂತೆಯೇ ಇತ್ತೀಚೆಗೆ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವಥ್ ನಾರಾಯಣ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಆಸ್ಪತ್ರೆಯ ಸವಲತ್ತುಗಳನ್ನು ವೀಕ್ಷಿಸಿ ಇದನ್ನು ಅಪ್ ಗ್ರೇಡ್ ಮಾಡುವ ಕುರಿತು ಭರವಸೆ ನೀಡಿದರು. ಅದರಂತೆ ಐಪಿಪಿ ಕಟ್ಟಡದಲ್ಲಿ ಕಾಮಗಾರಿ ಆರಂಭವಾಗಿದ್ದು, ಆಗಸ್ಟ್ 2ನೇ ವಾರದಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ನಮ್ಮ ಪಾಲಿಗೆ ಇದೊಂದು ದೊಡ್ಡ ಸವಾಲಾಗಿದೆ.  ಐಸಿಯು ಬೆಡ್ ಸವಲತ್ತು ಆರಂಭವಾದರೆ ನಮಗೆ ಹೆಚ್ಚುವರಿ ಸಿಬ್ಬಂದಿಗಳ ಅವಶ್ಯಕತೆ ಬೀಳುತ್ತದೆ. ಈ ಬಗ್ಗೆ ಉಪ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದೇವೆ. ಅಗತ್ಯ ಬಿದ್ದರೆ ಅರಿವಳಿಕೆ ತಜ್ಞರು, ವೈದ್ಯರು, ಶುಶ್ರೂಷಾ ಸಿಬ್ಬಂದಿ, ಗ್ರೂಪ್ ಡಿ ಕಾರ್ಮಿಕರು ಮತ್ತು ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ಇತರೆ ಹೊಸ ಸಿಬ್ಬಂದಿಗಳನ್ನು ನೇಮಿಸುವ ಭರವಸೆ ನೀಡಿದ್ದಾರೆ. ಈ ಕಾರ್ಯ ಕೂಡ ಪ್ರಗತಿಯಲ್ಲಿ ಎಂದು ವೆಂಕಟೇಶಯ್ಯ ಹೇಳಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT