ದೇವರ ಗರ್ಭಗುಡಿಯಲ್ಲೇ ಪೂಜಾರಿ ಸಾವು 
ರಾಜ್ಯ

ಮಂಡ್ಯ: ದೇವರ ಗರ್ಭಗುಡಿಯಲ್ಲೇ ಪೂಜಾರಿ ಸಾವು

ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದ ವೇಳೆ ಗರ್ಭಗುಡಿಯಲ್ಲೇ ಪೂಜಾರಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ತಾಲೂಕಿನ ಮಂಗಲ ಗ್ರಾಮದಲ್ಲಿ ಜರುಗಿದೆ.

ಮಂಡ್ಯ: ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದ ವೇಳೆ ಗರ್ಭಗುಡಿಯಲ್ಲೇ ಪೂಜಾರಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ತಾಲೂಕಿನ ಮಂಗಲ ಗ್ರಾಮದಲ್ಲಿ ಜರುಗಿದೆ.

ಮಲ್ಲೇಶ್ವರಸ್ವಾಮಿ ದೇವಸ್ಥಾನದ ಪೂಜಾರಿ ಚಂದ್ರಶೇಖರ್(45) ಮೃತಪಟ್ಟವರಾಗಿದ್ದಾರೆ.

ಮೂಲಯಃ ಸಂತೇ ಕಸಲಗೆರೆಯ ನಿವಾಸಿಯಾದ ಚಂದ್ರಶೇಖರ್ ಹಲವು ವರ್ಷಗಳಿಂದ ಮಂಗಲ ಗ್ರಾಮದಲ್ಲಿನ ಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದು ದೇವರ ಸೇವಾಕಾಯಕ ಮಾಡುತ್ತಿದ್ದರು, ವರಮಹಾಲಕ್ಷ್ಮಿ ಹಬ್ಬದ ದಿನವಾದ ಶುಕ್ರವಾರ ಮಧ್ಯಾಹ್ನ ದೇವಾಯದಲ್ಲಿ ಮಲ್ಲೇಶ್ವರಸ್ವಾಮಿಗೆ ಪೂಜೆ ಮಾಡುತ್ತಿದ್ದರು, ಈ ವೇಳೆ, ಗರ್ಭಗುಡಿಯಲ್ಲೇ ಎದೆ ನೋವು ಕಾಣಿಸಿಕೊಂಡು ಬಿದ್ದಿದ್ದಾರೆ. ಇದನ್ನು ಕಂಡ ಸ್ಥಳಿಯ ಭಕ್ತರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ಮೃತ ಚಂದ್ರು ಅವರಿಗೆ ಪತ್ನಿ ಹಾಗೂ ಐವರು ಸೋದರಿಯರು ಇದ್ದಾರೆ. ಸುಮಾರು 12 ವರ್ಷದ ಹಿಂದೆ ಮದುವೆಯಾಗಿದ್ದ ಚಂದ್ರಶೇಖರ್‌ಗೆ ಮಕ್ಕಳಾಗಿರಲಿಲ್ಲ. ಇದೇ ಕೊರಗಿನಲ್ಲಿದ್ದ ದಂಪತಿಯು ಮಗುವೊಂದನ್ನು ದತ್ತು ತೆಗೆದುಕೊಳ್ಳುವ ಆಲೋಚನೆಯಲ್ಲಿದ್ದರು. ಆದರೆ, ಆ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಚಂದ್ರು ಸಾವನ್ನಪ್ಪಿದ್ದಾರೆ.

ವರದಿ ನಾಗಯ್ಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT