ದೇವರ ಗರ್ಭಗುಡಿಯಲ್ಲೇ ಪೂಜಾರಿ ಸಾವು 
ರಾಜ್ಯ

ಮಂಡ್ಯ: ದೇವರ ಗರ್ಭಗುಡಿಯಲ್ಲೇ ಪೂಜಾರಿ ಸಾವು

ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದ ವೇಳೆ ಗರ್ಭಗುಡಿಯಲ್ಲೇ ಪೂಜಾರಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ತಾಲೂಕಿನ ಮಂಗಲ ಗ್ರಾಮದಲ್ಲಿ ಜರುಗಿದೆ.

ಮಂಡ್ಯ: ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದ ವೇಳೆ ಗರ್ಭಗುಡಿಯಲ್ಲೇ ಪೂಜಾರಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ತಾಲೂಕಿನ ಮಂಗಲ ಗ್ರಾಮದಲ್ಲಿ ಜರುಗಿದೆ.

ಮಲ್ಲೇಶ್ವರಸ್ವಾಮಿ ದೇವಸ್ಥಾನದ ಪೂಜಾರಿ ಚಂದ್ರಶೇಖರ್(45) ಮೃತಪಟ್ಟವರಾಗಿದ್ದಾರೆ.

ಮೂಲಯಃ ಸಂತೇ ಕಸಲಗೆರೆಯ ನಿವಾಸಿಯಾದ ಚಂದ್ರಶೇಖರ್ ಹಲವು ವರ್ಷಗಳಿಂದ ಮಂಗಲ ಗ್ರಾಮದಲ್ಲಿನ ಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದು ದೇವರ ಸೇವಾಕಾಯಕ ಮಾಡುತ್ತಿದ್ದರು, ವರಮಹಾಲಕ್ಷ್ಮಿ ಹಬ್ಬದ ದಿನವಾದ ಶುಕ್ರವಾರ ಮಧ್ಯಾಹ್ನ ದೇವಾಯದಲ್ಲಿ ಮಲ್ಲೇಶ್ವರಸ್ವಾಮಿಗೆ ಪೂಜೆ ಮಾಡುತ್ತಿದ್ದರು, ಈ ವೇಳೆ, ಗರ್ಭಗುಡಿಯಲ್ಲೇ ಎದೆ ನೋವು ಕಾಣಿಸಿಕೊಂಡು ಬಿದ್ದಿದ್ದಾರೆ. ಇದನ್ನು ಕಂಡ ಸ್ಥಳಿಯ ಭಕ್ತರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ಮೃತ ಚಂದ್ರು ಅವರಿಗೆ ಪತ್ನಿ ಹಾಗೂ ಐವರು ಸೋದರಿಯರು ಇದ್ದಾರೆ. ಸುಮಾರು 12 ವರ್ಷದ ಹಿಂದೆ ಮದುವೆಯಾಗಿದ್ದ ಚಂದ್ರಶೇಖರ್‌ಗೆ ಮಕ್ಕಳಾಗಿರಲಿಲ್ಲ. ಇದೇ ಕೊರಗಿನಲ್ಲಿದ್ದ ದಂಪತಿಯು ಮಗುವೊಂದನ್ನು ದತ್ತು ತೆಗೆದುಕೊಳ್ಳುವ ಆಲೋಚನೆಯಲ್ಲಿದ್ದರು. ಆದರೆ, ಆ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಚಂದ್ರು ಸಾವನ್ನಪ್ಪಿದ್ದಾರೆ.

ವರದಿ ನಾಗಯ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT