ದೇವರ ಗರ್ಭಗುಡಿಯಲ್ಲೇ ಪೂಜಾರಿ ಸಾವು 
ರಾಜ್ಯ

ಮಂಡ್ಯ: ದೇವರ ಗರ್ಭಗುಡಿಯಲ್ಲೇ ಪೂಜಾರಿ ಸಾವು

ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದ ವೇಳೆ ಗರ್ಭಗುಡಿಯಲ್ಲೇ ಪೂಜಾರಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ತಾಲೂಕಿನ ಮಂಗಲ ಗ್ರಾಮದಲ್ಲಿ ಜರುಗಿದೆ.

ಮಂಡ್ಯ: ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದ ವೇಳೆ ಗರ್ಭಗುಡಿಯಲ್ಲೇ ಪೂಜಾರಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ತಾಲೂಕಿನ ಮಂಗಲ ಗ್ರಾಮದಲ್ಲಿ ಜರುಗಿದೆ.

ಮಲ್ಲೇಶ್ವರಸ್ವಾಮಿ ದೇವಸ್ಥಾನದ ಪೂಜಾರಿ ಚಂದ್ರಶೇಖರ್(45) ಮೃತಪಟ್ಟವರಾಗಿದ್ದಾರೆ.

ಮೂಲಯಃ ಸಂತೇ ಕಸಲಗೆರೆಯ ನಿವಾಸಿಯಾದ ಚಂದ್ರಶೇಖರ್ ಹಲವು ವರ್ಷಗಳಿಂದ ಮಂಗಲ ಗ್ರಾಮದಲ್ಲಿನ ಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದು ದೇವರ ಸೇವಾಕಾಯಕ ಮಾಡುತ್ತಿದ್ದರು, ವರಮಹಾಲಕ್ಷ್ಮಿ ಹಬ್ಬದ ದಿನವಾದ ಶುಕ್ರವಾರ ಮಧ್ಯಾಹ್ನ ದೇವಾಯದಲ್ಲಿ ಮಲ್ಲೇಶ್ವರಸ್ವಾಮಿಗೆ ಪೂಜೆ ಮಾಡುತ್ತಿದ್ದರು, ಈ ವೇಳೆ, ಗರ್ಭಗುಡಿಯಲ್ಲೇ ಎದೆ ನೋವು ಕಾಣಿಸಿಕೊಂಡು ಬಿದ್ದಿದ್ದಾರೆ. ಇದನ್ನು ಕಂಡ ಸ್ಥಳಿಯ ಭಕ್ತರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ಮೃತ ಚಂದ್ರು ಅವರಿಗೆ ಪತ್ನಿ ಹಾಗೂ ಐವರು ಸೋದರಿಯರು ಇದ್ದಾರೆ. ಸುಮಾರು 12 ವರ್ಷದ ಹಿಂದೆ ಮದುವೆಯಾಗಿದ್ದ ಚಂದ್ರಶೇಖರ್‌ಗೆ ಮಕ್ಕಳಾಗಿರಲಿಲ್ಲ. ಇದೇ ಕೊರಗಿನಲ್ಲಿದ್ದ ದಂಪತಿಯು ಮಗುವೊಂದನ್ನು ದತ್ತು ತೆಗೆದುಕೊಳ್ಳುವ ಆಲೋಚನೆಯಲ್ಲಿದ್ದರು. ಆದರೆ, ಆ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಚಂದ್ರು ಸಾವನ್ನಪ್ಪಿದ್ದಾರೆ.

ವರದಿ ನಾಗಯ್ಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

Gen-Z ಗಳಿಗೆ ʻಜನರೇಷನ್‌ ಗಟರ್‌ʼಎಂದ ಕಂಗನಾ ರಣಾವತ್; ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ, ಸಿಜೆಪಿ ತಿರುಗೇಟು! Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

NEET ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ಮುಂದು!