ಸಂಗ್ರಹ ಚಿತ್ರ 
ರಾಜ್ಯ

ಭಾನುವಾರದ ಲಾಕ್‌ಡೌನ್ ತೆರವು: ವಾಹನ, ಜನ ಸಂಚಾರ ಯಥಾಸ್ಥಿತಿ

ಅನ್‌ಲೌಕ್‌-3 ಮಾರ್ಗಸೂಚಿ ನಿನ್ನೆಯಿಂದ ಜಾರಿಗೆ ಬಂದಿದ್ದು, ಮಾರ್ಗಸೂಚಿಯಲ್ಲಿ ಸೂಚಿಸಿದ್ದಂತೆ ಭಾನುವಾರದ ಲಾಕ್‌ಡೌನ್‌ ಹಿಂಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆ ಇಂದು ವಾಹನ ಸಂಚಾರ ಹಾಗೂ ಜನಜೀವನ ಎಂದಿನಂತಿದೆ. 

ಬೆಂಗಳೂರು: ಅನ್‌ಲೌಕ್‌-3 ಮಾರ್ಗಸೂಚಿ ನಿನ್ನೆಯಿಂದ ಜಾರಿಗೆ ಬಂದಿದ್ದು, ಮಾರ್ಗಸೂಚಿಯಲ್ಲಿ ಸೂಚಿಸಿದ್ದಂತೆ ಭಾನುವಾರದ ಲಾಕ್‌ಡೌನ್‌ ಹಿಂಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಕಡೆ ಇಂದು ವಾಹನ ಸಂಚಾರ ಹಾಗೂ ಜನಜೀವನ ಎಂದಿನಂತಿದೆ. 

ಕಳೆದ ಎರಡು ತಿಂಗಳುಗಳ ಭಾನುವಾರಗಳಂದು ಲಾಕ್‌ಡೌನ್ ಇದ್ದುದರಿಂದ ಜನರು ಮನೆಯಿಂದ ಹೊರಗಡೆ ಬಂದಿರಲಿಲ್ಲ. ಆದರೆ ಈ ಭಾನುವಾರ ಎಲ್ಲಾ ಚಟುವಟಿಕೆಗಳು ಆರಂಭಗೊಂಡಿವೆ.

ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ಹೊರಗೆ ಆಟೋ ಹಾಗೂ ಕ್ಯಾಬ್‌ ಸಂಚಾರ ಎಂದಿನಂತಿದ್ದು, ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಎಂದಿನಂತೆ ಸಂಚರಿಸುತ್ತಿದೆ. ಆದರೆ ಪ್ರಯಾಣಿಕರ ಸಂಖ್ಯೆ ವಿರಳವಾಗಿದೆ. ಭಾನುವಾರ ರಜಾ ದಿನವಾಗಿರುವುದರಿಂದ ಸರ್ಕಾರಿ ಕಚೇರಿ, ಖಾಸಗಿ ಕಚೇರಿಗಳು ಬಂದ್ ಆಗಿರುವುದರಿಂದ ಜನಸಂಚಾರವೂ ವಿರಳವಾಗಿದೆ. ಆದರೆ ದ್ವಿಚಕ್ರ ವಾಹನ ಸವಾರರು ಮಾತ್ರ ಯಾವುದೇ ಆತಂಕ ಇಲ್ಲದೆ ಎಂದಿನಂತೆ ಸಂಚರಿಸುತ್ತಿರುವುದು ಕಂಡುಬಂತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT