ಸಾಂದರ್ಭಿಕ ಚಿತ್ರ 
ರಾಜ್ಯ

ಶಾಲಾ ಮಕ್ಕಳ ಮನೆಗಳಿಗೆ ಹಾಲಿನ ಪೌಡರ್ ವಿತರಣೆ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪೌಷ್ಠಿಕತೆಯ ಮಟ್ಟವನ್ನು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಕ್ಷಿರಭಾಗ್ಯ ಯೋಜನೆ ಫಲಾನುಭವಿಗಳಿಗೆ ಪಡಿತರದೊಂದಿಗೆ ಹಾಲಿನ ಪುಡಿ ವಿತರಿಸುವಂತೆ ರಾಜ್ಯಸರ್ಕಾರ ಕೋವಿಡ್-19 ನಿರ್ವಹಣೆಗಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆಗಳಿಗೆ ನಿರ್ದೇಶನ ನೀಡಿದೆ.

ಬೆಂಗಳೂರು:  ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪೌಷ್ಠಿಕತೆಯ ಮಟ್ಟವನ್ನು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಕ್ಷಿರಭಾಗ್ಯ ಯೋಜನೆ ಫಲಾನುಭವಿಗಳಿಗೆ ಪಡಿತರದೊಂದಿಗೆ ಹಾಲಿನ ಪುಡಿ ವಿತರಿಸುವಂತೆ ರಾಜ್ಯಸರ್ಕಾರ ಕೋವಿಡ್-19 ನಿರ್ವಹಣೆಗಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆಗಳಿಗೆ ನಿರ್ದೇಶನ ನೀಡಿದೆ.

ಸಾಂಕ್ರಾಮಿಕ ಕಾಯಿಲೆ ಕಾಣಿಸಿಕೊಂಡಾಗಿನಿಂದಲೂ ಬಹುತೇಕ ಮಂದಿ ಆರ್ಥಿಕವಾಗಿ ಹಿಂದುಳಿದಿರುವ ಸರ್ಕಾರಿ ಮಕ್ಕಳ ಪೌಷ್ಟಿಕ ಮಟ್ಟದ ಬಗ್ಗೆ ಸರ್ಕಾರ ಕಾಳಜಿ ವಹಿಸುತ್ತಿದೆ.

ರಾಜ್ಯಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಂದ ಸುಮಾರು 64 ಲಕ್ಷ ವಿದ್ಯಾರ್ಥಿಗಳನ್ನು ಈ ಯೋಜನೆ ಒಳಗೊಳ್ಳಲಿದೆ ಎಂದು ರಾಜ್ಯ ಹಾಲು ಮಹಾಮಂಡಳ ವ್ಯವಸ್ಥಾಪಕ ನಿರ್ದೇಶಕ ಬಿಸಿ ಸತೀಶ್  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಆರು ತಿಂಗಳಿನಿಂದ ಆರು ವರ್ಷದೊಳಗಿನ 39.5 ಲಕ್ಷ ಅಂಗನವಾಡಿ ಮಕ್ಕಳಿಗೆ ಕೆಎಂಎಫ್ ಈಗಾಗಲೇ ಹಾಲು ವಿತರಿಸುತ್ತಿದೆ. ಎಲ್ಲಾ ಮಕ್ಕಳಿಗೂ ಪ್ರತಿದಿನ 15 ಗ್ರಾಮ್ ಹಾಲಿನ ಪುಡಿಯನ್ನು ವಿತರಿಸಲಾಗುತ್ತಿದೆ.ಪ್ರತಿದಿನ ಮೂರು ಲಕ್ಷ ಲೀಟರ್ ಹಾಲನ್ನು 35 ಮೆಟ್ರಿಕ್ ಟನ್ ಹಾಲಿನ ಪುಡಿಯನ್ನಾಗಿ ಮಾರ್ಪಡಿಸಿ ಇಂತಹ ಮಕ್ಕಳಿಗೆ ನೀಡಲಾಗುತ್ತಿದೆ. ಈಗ ಯೋಜನೆಯನ್ನು ಒಂದರಿಂದ 10ನೇ ತರಗತಿಯವರೆಗೂ ನೀಡುತ್ತಿರುವುದರಿಂದ 64 ಲಕ್ಷಕ್ಕೂ ಹೆಚ್ಚು ಯುವಕರು ಕೂಡಾ ಪ್ರಯೋಜನ ಪಡೆದುಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಾಮಾನ್ಯವಾಗಿ ಕ್ಷೀರ ಭಾಗ್ಯ ಯೋಜನೆಯಡಿ ಪ್ರತಿ ವಿದ್ಯಾರ್ಥಿಗೂ 18 ಗ್ರಾಮ್ ಪೌಡರ್ ನೀಡಲಾಗುತ್ತಿದೆ. ಆದರೆ, ಸಾಂಕ್ರಾಮಿಕ ರೋಗದ ಕಾರಣ ಶಾಲೆ ತೆರೆಯದ ಕಾರಣ ವಿದ್ಯಾರ್ಥಿಗಳಿಗೆ ಹಾಲು ದೊರೆಯುತ್ತಿಲ್ಲ. ಈ ಹಾಲಿನಲ್ಲಿ ಶೇ.3.5 ರಷ್ಟು ಕೊಬ್ಬಿನಾಂಶ ಇರಲಿದೆ. ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಅರ್ಧ ಕಿಲೋನಂತೆ ಎರಡು ತಿಂಗಳವರೆಗೂ ಹಾಲಿನ ಪೌಡರ್ ವಿತರಿಸಲಿದೆ. ಈ ಸಂಬಂಧ ಸದ್ಯದಲ್ಲಿ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT