ಸಂಗ್ರಹ ಚಿತ್ರ 
ರಾಜ್ಯ

ಅಯೋಧ್ಯೆ ರಾಮಮಂದಿರಕ್ಕೆ ನಾಳೆ ಭೂಮಿ ಪೂಜೆ: ಆದಿಚುಂಚನ ಗಿರಿ ಶ್ರೀಗಳಿಗೆ ಆಹ್ವಾನ

ಅಯೋಧ್ಯೆಯಲ್ಲಿ ಆ.5ರಂದು ನಡೆಯಲಿರುವ ಶ್ರೀ ರಾಮ ಮಂದಿರ ನಿರ್ಮಾಣದ ಭೂಮಿಪೂಜೆಯಲ್ಲಿ ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ನಾಥ ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಬೆಂಗಳೂರು: ಅಯೋಧ್ಯೆಯಲ್ಲಿ ಆ.5ರಂದು ನಡೆಯಲಿರುವ ಶ್ರೀ ರಾಮ ಮಂದಿರ ನಿರ್ಮಾಣದ ಭೂಮಿಪೂಜೆಯಲ್ಲಿ ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ನಾಥ ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ನಿರ್ಮಲಾನಂದ ನಾಥ ಸ್ವಾಮೀಜಿಗಳೊಂದಿಗೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರಿಗೂ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಆದರೆ, ಉಡುಪಿಯಲ್ಲಿ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗಳು ಚತುರ್ಮಾಸ ವ್ರತ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ. 

ಚತುರ್ಮಾಸ ವ್ರತ ಆಶಾಡದಲ್ಲಿ ಆರಂಭವಾಗಲಿದ್ದು, ನಾಲ್ಕು ತಿಂಗಳು ಕಾಲ ಈ ವ್ರತವನ್ನುನ ಡೆಸಲಾಗುತ್ತಿದೆ. ವ್ರತದ ಸಂದರ್ಭದಲ್ಲಿ ಶ್ರೀಗಳು ಎಲ್ಲಿಗೂ ಪ್ರಯಾಣ ಬೆಳೆಸುವುದಿಲ್ಲ. ಇನ್ನು ವೀರೇಂದ್ರ ಹೆಗಡೆಯವರು ಯಾವ ಕಾರಣಕ್ಕೆ ಭಾಗವಹಿಸುತ್ತಿಲ್ಲ ಎಂಬುದರ ಕುರಿತು ಇನ್ನೂ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ. 

ಇನ್ನು ಆಹ್ವಾನ ಬಂದಿರುವ ಹಿನ್ನೆಲೆಯಲ್ಲಿ ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ನಾಥ ಸ್ವಾಮೀಜಿಯವರು ಅಯೋಧ್ಯೆಗೆ ತೆರಳುತ್ತಿದ್ದು, ಶ್ರೀಗಳು ಮಂಗಳವಾರ ಬೆಳಿಗ್ಗೆ ಬೆಂಗಳೂರಿನಿಂದ ಲಖನೌಗೆ ವಿಮಾನದ ಮೂಲಕ ತೆರಳಲಿದ್ದಾರೆಂದು ತಿಳಿದುಬಂದಿದೆ. ಲಖನೌಗೆ ಭೇಟಿ ನೀಡಿದ ಬಳಿಕ ವಾರಣಾಸಿಯಲ್ಲಿರುವ ತಮ್ಮ ಮಠದ ವಿಭಾಗದಲ್ಲಿ ನೆಲೆಯೂರಲಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದು ಹಲವರಲ್ಲಿ ಆಶ್ಚರ್ಯವನ್ನು ಮೂಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT