ಲಗೇಜ್ ಸೋಂಕು ನಿವಾರಕ ಯಂತ್ರ 
ರಾಜ್ಯ

ಕೆಎಸ್ಆರ್ ರೈಲ್ವೇ ನಿಲ್ದಾಣದಲ್ಲಿ ಲಗೇಜ್ ಸೋಂಕು ನಿವಾರಕ ಯಂತ್ರ

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಮಯದಲ್ಲಿ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಲಗೇಜುಗಳನ್ನು ಸೋಂಕು ಮುಕ್ತಗೊಳಿಸುವ ಯುವಿ ಬ್ಯಾಗೇಜ್ ಬಾತ್ ಯಂತ್ರವನ್ನು ಅಳವಡಿಸಲಾಗಿದೆ. 

ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಮಯದಲ್ಲಿ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಲಗೇಜುಗಳನ್ನು ಸೋಂಕು ಮುಕ್ತಗೊಳಿಸುವ ಯುವಿ ಬ್ಯಾಗೇಜ್ ಬಾತ್ ಯಂತ್ರವನ್ನು ಅಳವಡಿಸಲಾಗಿದೆ. 

ರೈಲು ನಿಲ್ದಾಣದ ಎರಡನೇ ಪ್ರವೇಶ ದ್ವಾರದ ಬಳಿ ಈ ಯಂತ್ರವನ್ನು ಅಳವಡಿಸಲಾಗಿದೆ. ಬೆಂಗಳೂರು ವಿಭಾಗೀಯ ರೈಲ್ವೇ ಆಡಳಿತ ವಿಭಾಗದ ಹೆಚ್ಚುವರಿ ವ್ಯವಸ್ಥಾಪಕಿ ಕಲ್ಯಾಣಿ ಸೇತುರಾಮನ್ ಹಾಗೂ ವಾಣಿಜ್ಯ ವಿಭಾಗದ ವ್ಯವಸ್ಥಾಪಕ ಡಾ.ಎ.ಎನ್,ಕೃಷ್ಣ ರೆಟ್ಟಿಯವರು ಸೋಮವಾರ ಈ ಸೋಂಕು ನಿವಾರಕ ಯಂತ್ರಕ್ಕೆ ಚಾಲನೆ ನೀಡಿದರು. 

ಪ್ರಯಾಣಿಕರು ರೈಲು ನಿಲ್ದಾಣ ಪ್ರವೇಶಕ್ಕೂ ಮುನ್ನ ಈ ಸೋಂಕು ನಿವಾರಕ ಸುರಂಗಾಕೃತಿಯ ಯಂತ್ರದಲ್ಲಿ ತಮ್ಮ ಲಗೇಜ್ ಗಳನ್ನು ಹಾಕಬೇಕು. ಈ ವೇಳೆ ಯಂತ್ರದಲ್ಲಿ ಅಲ್ಟ್ರಾ ವಯಲೇಟ್ ಕಿರಣಗಳು ಲಗೇಜ್ ಗಳ ಮೇಲಿನ ವೈರಸ್, ಬ್ಯಾಕ್ಟಿರಿಯಾ ಸೇರಿದಂತೆ ಎಲ್ಲ ರೀತಿಯ ಸೋಂಕುಗಳನ್ನು ನಿವಾರಿಸುತ್ತದೆ. 

ಬಳಿಕ ಸಿಬ್ಬಂದಿ ಸೋಂಕು ಮುಕ್ತ ಎಂಬ ಚೀಟಿಯನ್ನು ಆ ಲಗೇಜ್ ಮೇಲೆ ಅಂಟಿಸಿ, ಪ್ರಯಾಣಿಕರಿಗೆ ಹಿಂದುರಿಸಲಿದ್ದಾರೆ. ಉಚಿತ ಸೇವೆ ನೀಡಲಾಗುತ್ತಿದೆ. ಬಳಿಕ ದರ ನಿಗಪಡಿಸಲು ತೀರ್ಮಾನಿಸಲಾಗಿದೆ. ಚೆನ್ನೈ ಮೂಲಕ ಆಪ್ಟಿಮರ್ ಬಯೋ ಮತ್ತು ಐಟಿ ಸೆಲ್ಯೂಷನ್ ಈ ಯಂತ್ರವನ್ನು ಅಭಿವದ್ಧಿಪಡಿಸಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT