ಸಂಗ್ರಹ ಚಿತ್ರ 
ರಾಜ್ಯ

ಶ್ರೀರಾಮ ಭಕ್ತರಿಗೆ ತಯಾರಾಗುತ್ತಿರುವ ಲಡ್ಡುಗೆ 20 ಸಾವಿರ ಕೆಜಿ ನಂದಿನಿ ತುಪ್ಪ

ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ‘ಭೂಮಿ ಪೂಜೆಯಲ್ಲಿ ಈ ಸಂದರ್ಭದಲ್ಲಿ 1.25 ಲಕ್ಷಕ್ಕೂ ಹೆಚ್ಚು ‘ರಘುಪತಿ ಲಡ್ಡುʼಗಳನ್ನು ತಯಾರಿಸಲು ನಂದಿನಿ ತುಪ್ಪ ಕಳುಹಿಸಿಕೊಡಲಾಗಿದೆ.

ಬೆಂಗಳೂರು: ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ‘ಭೂಮಿ ಪೂಜೆಯಲ್ಲಿ ಈ ಸಂದರ್ಭದಲ್ಲಿ 1.25 ಲಕ್ಷಕ್ಕೂ ಹೆಚ್ಚು ‘ರಘುಪತಿ ಲಡ್ಡುʼಗಳನ್ನು ತಯಾರಿಸಲು ನಂದಿನಿ ತುಪ್ಪ ಕಳುಹಿಸಿಕೊಡಲಾಗಿದೆ.

ಈ ಲಡ್ಡು ತಯಾರಿಸಲು ಕೆಎಂಎಫ್  20 ಸಾವಿರ ಕೆಜಿ ನಂದಿನಿ ತುಪ್ಪವನ್ನು ಲಡ್ಡು ತಯಾರಿಸುವ ಹನುಮಾನ್ ದೇವಾಲಯಕ್ಕೆ ಕಳುಹಿಸಿದೆ, 15 ಕೆಜಿ ತೂಕದ ಟಿನ್ ಗಳನ್ನು ಟ್ರಕ್ ನಲ್ಲಿ ಕಳುಹಿಸಲಾಗಿದೆ ಎಂದು ಕೆಎಂಎಫ್ ಮ್ಯಾನೇಜಿಂಗ್ ಡೈರೆಕ್ಟರ್ ಬಿಸಿ ಸತೀಶ್ ಹೇಳಿದ್ದಾರೆ.

ಅಯೋಧ್ಯೆ ಬೆಂಗಳೂರಿನಿಂದ 1,800ಕಿಮೀ ದೂರವಿದೆ, ಹೀಗಿರುವಾಗ ಅಯೋಧ್ಯೆಯಲ್ಲಿ ಕರ್ನಾಟಕದ ಚಿತ್ರ ಹೇಗೆ ಬಂತು ಎಂಬ ಪ್ರಶ್ನೆಗೆ ಇಲ್ಲಿದೆ, ಪಾಟ್ನಾದಲ್ಲಿ ಲಡ್ಡು ತಯಾರಿಸುವ   ಹನುಮಾನ್ ದೇವಾಲಯ ಕೆಎಂಎಫ್ ನಿಂದ ತುಪ್ಪ ಖರೀದಿಸಿತ್ತು. ಈ ದೇವಾಲಯದ ಮ್ಯಾನೇಜರ್ ಶೇಷಾದ್ರಿ ಅವರು ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನವರಾಗಿದ್ದಾರೆ.

ಇವರು ಈ ಮೊದಲು ತಿರುಪತಿಯಲ್ಲಿ ಕೆಲಸ ಮಾಡುತ್ತಿದ್ದರು,  ತಿರುಪತಿಯಲ್ಲಿ ಲಡ್ಡು ಮಾಡಲು ನಂದಿನಿ ತುಪ್ಪ ಉಫಯೋಗಿಸುವುದರ ಬಗ್ಗೆ ಮಾಹಿತಿ ಇದ್ದ  ಇವರು ನಂದಿನಿ ತುಪ್ಪ ಬಳಸಲು ಮುಂದಾಗಿದ್ದಾರೆ, ಸುಮಾರು 60 ಮಂದಿ ಸಿಬ್ಬಂದಿ 1.5 ಲಕ್ಷ ಲಡ್ಡು ತಯಾರಿಸಲಿದ್ದಾರೆ, ಹಸುವಿನ ಹಾಲಿನ ಬದಲಾಗಿ ನಂದಿನಿ ತುಪ್ಪವನ್ನು ಬಳಸಲಾಗುತ್ತದೆ  ಎಂದು ಹೇಳಿದ್ದಾರೆ.

ಮಹಾದೇವ್ ಮಂದಿರ ಟ್ರಸ್ಟ್ ಈ ಒಟ್ಟು ಲಡ್ಡುಗಳ ಪೈಕಿ ಅಯೋಧ್ಯೆಯಲ್ಲಿರುವ ಭವ್ಯ ರಾಮ ದೇವಾಲಯದ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ರಚಿಸಲಾಗಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ  ಸುಮಾರು 51,000 ಲಡ್ಡುಗಳನ್ನು ಹಸ್ತಾಂತರಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!