ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ 
ರಾಜ್ಯ

ಗಡಿಭಾಗದ ನೀರಿನ ಸಮಸ್ಯೆ ಪರಿಹರಿಸಲು ಆಂಧ್ರ ಪ್ರದೇಶದೊಂದಿಗೆ ನೀರು ಹಂಚಿಕೆ: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್

ಚಿಕ್ಕಬಳ್ಳಾಪುರದ ಗಡಿಭಾಗದಲ್ಲಿ ಕುಡಿಯುವ ನೀರಿನ ಕೊರತೆ ನೀಗಿಸಲು ಆಂಧ್ರಪ್ರದೇಶದಿಂದ ನೀರು ಪಡೆಯುವ ಕುರಿತು ಚರ್ಚೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಗಡಿಭಾಗದಲ್ಲಿ ಕುಡಿಯುವ ನೀರಿನ ಕೊರತೆ ನೀಗಿಸಲು ಆಂಧ್ರಪ್ರದೇಶದಿಂದ ನೀರು ಪಡೆಯುವ ಕುರಿತು ಚರ್ಚೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಗರಸಭೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 7.29 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, “ಚಿಕ್ಕಬಳ್ಳಾಪುರ ತಾಲೂಕಿನ ನೀರಿನ ಸಮಸ್ಯೆ ಪರಿಹರಿಸಲು ಎಚ್ ಎನ್ ವ್ಯಾಲಿಯಿಂದ ಕೆರೆಗಳಿಗೆ ನೀರು ತುಂಬಿಸುವ ಕೆಲಸವಾಗುತ್ತಿದೆ. ಗೌರಿಬಿದನೂರಿಗೂ ಈ ನೀರು ಸಿಗಲಿದೆ. ಎತ್ತಿನಹೊಳೆ ಯೋಜನೆಯಿಂದಲೂ ಈ ಭಾಗಗಳಿಗೆ ನೀರು ನೀಡುವ ಪ್ರಯತ್ನ ನಡೆದಿದೆ. ಇದರ ಜೊತೆಗೆ ಆಂಧ್ರಪ್ರದೇಶದಿಂದ 5 ರಿಂದ 10 ಟಿಎಂಸಿ ನೀರು ಪಡೆಯುವ ಬಗ್ಗೆ ಚರ್ಚೆಯಾಗಿದೆ. ಜಲಸಂಪನ್ಮೂಲ ಸಚಿವರ ಜೊತೆ ಈ ಬಗ್ಗೆ ಚರ್ಚಿಸಲಾಗಿದೆ,’’ ಎಂದು ತಿಳಿಸಿದರು.

“ಆಂಧ್ರದಿಂದ ಇಲ್ಲಿನ ಗಡಿಭಾಗಗಳಿಗೆ ನೀರು ಪಡೆದು, ಬೇರೆ ಮೂಲಗಳಿಂದ ಅಷ್ಟೇ ನೀರನ್ನು ಆಂಧ್ರಕ್ಕೆ ನೀಡುವ ಕುರಿತು ಚರ್ಚೆಯಾಗಿದೆ. ಶೀಘ್ರದಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಾಗುವುದು,’’ ಎಂದರು.

“ಗೌರಿಬಿದನೂರಿನಲ್ಲಿ ಕೈಗಾರಿಕೆ ಅಭಿವೃದ್ಧಿಯಾಗುತ್ತಿದೆ. ಇದಕ್ಕೆ ಪೂರಕವಾದಂತೆ ರಾಜ್ಯ ಸರ್ಕಾರ ಹೊಸ ಕೈಗಾರಿಕಾ ನೀತಿಯನ್ನು ಜಾರಿ ಮಾಡಿದೆ. ಚಿಕ್ಕಬಳ್ಳಾಪುರವನ್ನು ಕೂಡ ‘ಹಂತ 2’ ವರ್ಗದಲ್ಲಿ ಸೇರ್ಪಡೆಗೊಳಿಸಿದರೆ ಕೈಗಾರಿಕೆ ಅಭಿವೃದ್ಧಿ ಸುಲಭವಾಗಲಿದೆ. ಜೊತೆಗೆ ಉದ್ಯಮಿಗಳಿಗೆ ಹಲವು ಬಗೆಯ ರಿಯಾಯಿತಿ ದೊರೆಯಲಿದೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿದೆ,’’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತಲಾ 5 ಸಾವಿರ ರೂ. ವೈದ್ಯಕೀಯ ಸಹಾಯಧನ ವಿತರಿಸಲಾಯಿತು. ಆಶ್ರಯ ಯೋಜನೆಯಡಿಯ ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಲಾಯಿತು. ಶಾಸಕ ಶಿವಶಂಕರರೆಡ್ಡಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿಕ್ಕನರಸಿಂಹಯ್ಯ, ಮಾಜಿ ಶಾಸಕಿ ಜ್ಯೋತಿ ರೆಡ್ಡಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ED ದಾಳಿ ಅಂತ್ಯ: 3 ಕೋಟಿ ರೂ ನಗದು, ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಪತ್ತೆ; ಆ ಹಣ ನಮ್ಮದೇ ಎಂದ ಸತೀಶ್ ಜಾರಕಿಹೊಳಿ

Asia Cup 2026: ಮೊದಲ ಸೆಮಿಸ್‌ನಲ್ಲಿ ಬಾಂಗ್ಲಾವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ ಭಾರತ!

'ವಂದೇ ಮಾತರಂ' ಕಾನೂನಾಗಿದೆ; ತಾಕತ್ತಿದ್ದರೆ ಅಧಿಕಾರಕ್ಕೆ ಬಂದು ಬದಲಾಯಿಸಿ, ನನ್ನ ಅಭ್ಯಂತರವಿಲ್ಲ: ಕಾಂಗ್ರೆಸ್‌ಗೆ ಒಮರ್ ಅಬ್ದುಲ್ಲಾ ತಿರುಗೇಟು!

ಹಿಂಸೆ ಫ್ಯಾಷನ್ ಆಗಿಬಿಟ್ಟಿದೆ: ಮಣಿಪುರಿ ಸಂಗೀತಗಾರನ ಹತ್ಯೆಗೆ ನ್ಯಾಯ ಒದಗಿಸುವುದಾಗಿ ರಾಹುಲ್ ಗಾಂಧಿ ಪ್ರತಿಜ್ಞೆ! Video

ಇದನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ: ಕಿರಿಯ CJP ಕಾರ್ಯಕರ್ತೆಗೆ ಕಿರುಕುಳ, ಬೆದರಿಕೆ ಹಾಕಿದ್ದಕ್ಕೆ ಸುಪ್ರೀಂ ಕೋರ್ಟ್ ಗರಂ!