ಎಚ್. ಡಿ. ದೇವೇಗೌಡ 
ರಾಜ್ಯ

ರಾಜ್ಯದಲ್ಲಿ ಅತಿವೃಷ್ಠಿ: ವಿಶೇಷ ಆರ್ಥಿಕ ಪ್ಯಾಕೇಜ್ ಪ್ರಕಟಿಸುವಂತೆ ಕೇಂದ್ರಕ್ಕೆ ಎಚ್.ಡಿ. ದೇವೇಗೌಡ ಒತ್ತಾಯ

ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು  ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತಕ್ಷಣ ಆಗಬೇಕಾಗಿದೆ. ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಬೆಂಗಳೂರು: ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು  ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತಕ್ಷಣ ಆಗಬೇಕಾಗಿದೆ. ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದಲ್ಲಿ ಮಹಾಮಾರಿ ಕೊರೋನಾ ಒಂದು ಕಡೆ ವ್ಯಾಪಕವಾಗಿ ಹರಡುತ್ತಿದೆ. ಇದರ ಜೊತೆಗೆ ದುರದೃಷ್ಟವಷಾತ್ ರಾಜ್ಯದಲ್ಲಿ ಅತಿವೃಷ್ಟಿಯಿಂದ ಜನತೆ ಕಂಗಾಲು  ಪಡುವಂತಾಗಿದೆ. ಇದೆ ಸಮಯದಲ್ಲಿ ಮುಖ್ಯಮಂತ್ರಿಗಳಿಗೆ ಕೊರೋನಾ ಸೋಂಕು ತಗುಲಿದೆ, ಅವರು ಆಸ್ಪತ್ರೆಯಿಂದಲೇ ಕಾರ್ಯ ನಿರ್ವಹಿಸಬೇಕಾದ
ಸಂದರ್ಭ ಬಂದಿದೆ. ಬಹುತೇಕ  ರಾಜ್ಯದ ಎಲ್ಲಾ ಜಿಲ್ಲೆಗಳು ಮುಂಗಾರಿನ ಅಬ್ಬರದ  ಭೀತಿಯಿಂದ ನಲುಗಿದೆ. ಆದ್ದರಿಂದ ಮುಖ್ಯಮಂತ್ರಿ ಮತ್ತು ಸಚಿವರು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿಯನ್ನು  ನಿಭಾಯಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಅತಿವೃಷ್ಟಿಯಿಂದ ಬಳಲುತ್ತಿರುವ ರಾಜ್ಯದ ಜನತೆಗೆ ಕೂಡಲೇ ಆಸರೆ ಕೇಂದ್ರಗಳನ್ನು  ಸ್ಥಾಪಿಸಬೇಕಾಗಿದೆ. ಬಹುತೇಕ ರಾಜ್ಯದೆಲ್ಲೆಡೆ ಬೆಳೆಗಳು ಹಾನಿಗೊಳಗಾಗಿದೆ. ಜೊತೆಗೆ  ಮನೆ-ಮಠ ಕಳೆದುಕೊಂಡವರಿಗೆ ತಡಮಾಡದೆ ಸರ್ಕಾರ ಕೂಡಲೇ ಪರಿಹಾರ ಒದಗಿಸುವ ಕೆಲಸ  ಮಾಡಬೇಕಾಗಿದೆ ಎಂದು ದೇವೇಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT