ಐಶ್ವರ್ಯ ಮತ್ತು ಆರತಿ ಕೃಷ್ಣ 
ರಾಜ್ಯ

ಡಾ. ಆರತಿ ಕೃಷ್ಣ ಸಹಾಯದಿಂದ ಫಿಲಿಪ್ಪೈನ್ಸ್ ನಿಂದ ಚಿಕ್ಕಮಗಳೂರು ತಲುಪಿದ ವಿದ್ಯಾರ್ಥಿನಿ

ಅನಿವಾಸಿ ಭಾರತೀಯ ಸಚಿವಾಲಯದ ಮಾಜಿ ಸಲಹೆಗಾರ್ತಿ ಆರತಿ ಕೃಷ್ಣ ಅವರ ನೆರವಿನಿಂದಾಗಿ ಚಿಕ್ಕಮಗಳೂರಿನ ಮೆಡಿಕಲ್ ವಿದ್ಯಾರ್ಥಿನಿ ಫಿಲಿಪ್ಪೈನ್ಸ್ ನಿಂದ ಚಿಕ್ಕಮಗಳೂರಿಗೆ ವಾಪಸಾಗಿದ್ದಾರೆ.

ಚಿಕ್ಕಮಗಳೂರು: ಅನಿವಾಸಿ ಭಾರತೀಯ ಸಚಿವಾಲಯದ ಮಾಜಿ ಸಲಹೆಗಾರ್ತಿ ಆರತಿ ಕೃಷ್ಣ ಅವರ ನೆರವಿನಿಂದಾಗಿ ಚಿಕ್ಕಮಗಳೂರಿನ ಮೆಡಿಕಲ್ ವಿದ್ಯಾರ್ಥಿನಿ ಫಿಲಿಪ್ಪೈನ್ಸ್ ನಿಂದ ಚಿಕ್ಕಮಗಳೂರಿಗೆ ವಾಪಸಾಗಿದ್ದಾರೆ.

ಗಲ್ಪ್ ದೇಶಗಳಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರು ಮತ್ತು ಕರಾವಳಿ ಭಾಗದ 40 ಸಾವಿರ ಮಂದಿ ತವರಿಗೆ ವಾಪಾಸಾಗಲು ಸಹಾಯ ಮಾಡಿದ್ದಾರೆ.

ಸತ್ಯಪಾಲ ಎಂಬ ಕಾಫಿ ಪ್ಲಾಂಟರ್ ಅವರ ಪುತ್ರಿ ಐಶ್ವರ್ಯ ಕೆಬುವಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು, ಆಗಸ್ಟ್ 1 ರಂದು ಚೆನ್ನೈ ಏರ್ ಪೋರ್ಟ್ ತಲುಪಿ ಮೂರು ದಿನಗಳ ಕ್ವಾರಂಟೈನ್ ನಂತರ ಚಿಕ್ಕಮಗಳೂರಿಗೆ ಮರಳಿದ್ದಾರೆ.

ಫಿಲಿಫ್ಪೀನ್ಸ್ ನಲ್ಲಿ  ಜೂನ್ ತಿಂಗಳಿನಲ್ಲಿ ಕೊರೋನಾ ಹರಡಿದಾಗ ಐಶ್ವರ್ಯ ಪೋಷಕರು ಮಗಳ ಬಗ್ಗೆ ಆತಂಕಕ್ಕೊಳಗಾಗಿದ್ದರು. ತಮ್ಮ ಮಗಳನ್ನು ವಾಪಸ್ ಕರೆ ತರಲು ಕರ್ನಾಟಕದ ಹಲವು ರಾಜಕಾರಣಿಗಳನ್ನು ಸತ್ಯಪಾಲ್ ಸಂಪರ್ಕಿಸಿದರು,  ಆದರೆ ಯಾವುದೇ ಪ್ರಯೋಜನವಾಗಿಲ್ಲ, ಅಂತಿಮವಾಗಿ  ಕಾಂಗ್ರೆಸ್ ನ ಮಾಜಿ ಸಚಿವ ಬೆಗನೆ ರಾಮಯ್ಯ ಅವರ ಪುತ್ರಿ ಆರತಿ ಕೃಷ್ಣ ಅವರನ್ನು  ಸಂಪರ್ಕಿಸಿ ತಮ್ಮ ಮಗಳನ್ನು ವಾಪಸ್ ಕರೆತರಲು ಯಶಸ್ವಿಯಾಗಿದ್ದಾರೆ.

ವಲಸಿಗರಿಗೆ ಮನೆಗೆ ಮರಳಲು ಸಹಾಯ ಮಾಡುತ್ತಿರುವ ಆರತಿ ಕೃಷ್ಣ, ಭಾರತೀಯ ರಾಯಭಾರಿಯನ್ನು ಸಂಪರ್ಕಿಸಿ ಚೆನ್ನೈಗೆ ತೆರಳುವ ವಿಮಾನದಲ್ಲಿ ಈಶ್ವರ್ಯಾಗೆ ಆಸನ ಕಲ್ಪಿಸಿದರು, ಆರತಿ ಅವರ ಸಹಾಯವಿಲ್ಲದಿದ್ದರೇ ನನ್ನ ಮಗಳನ್ನು ವಾಪಸ್ ಕರೆತರಲು ಸಾಧ್ಯವಾಗುತ್ತಿರಲಿಲ್ಲ ಎಂದು ಐಶ್ವರ್ಯಾ ತಂದೆ ಸತ್ಯಪಾಲ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿಗೆ CM ಗದ್ದುಗೆ! ನಾಳೆ ನಿತೀಶ್ ರಾಜೀನಾಮೆ? ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

ಬೈಕ್ ಚಾಲನೆ ಮಾಡುತ್ತಾ Reels ರೆಕಾರ್ಡ್, ಭೀಕರ ಅಪಘಾತದಲ್ಲಿ ಯುವತಿ ಸಾವು, ಯುವಕ ಗಂಭೀರ! video

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

SCROLL FOR NEXT