ಬ್ರಹ್ಮಗಿರಿಯ ಹತ್ತಿರ ಬೆಟ್ಟ ಕುಸಿದ ಕಡೆ ಪರಿಶೀಲಿಸಿದ ಸಚಿವ ವಿ ಸೋಮಣ್ಣ 
ರಾಜ್ಯ

ಸತತ ಮಳೆಯಿಂದ ಅರ್ಚಕರ ಕುಟುಂಬವನ್ನು ಹುಡುಕುವ ರಕ್ಷಣಾ ಕಾರ್ಯಕ್ಕೆ ಅಡ್ಡಿ: ಸಚಿವ ವಿ.ಸೋಮಣ್ಣ

ಕೊಡಗು ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಶುಕ್ರವಾರ ಕೂಡ ಮುಂದುವರಿದಿದ್ದು, ಭಾಗಮಂಡಲದಲ್ಲಿ ಶ್ರೀ ಭಗಂಡೇಶ್ವರ ದೇವಾಲಯದ ಆವರಣಕ್ಕೆ ಕಾವೇರಿ ನದಿ ನೀರು ನುಗ್ಗಿದೆ.

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಶುಕ್ರವಾರ ಕೂಡ ಮುಂದುವರಿದಿದ್ದು, ಭಾಗಮಂಡಲದಲ್ಲಿ ಶ್ರೀ ಭಗಂಡೇಶ್ವರ ದೇವಾಲಯದ ಆವರಣಕ್ಕೆ ಕಾವೇರಿ ನದಿ ನೀರು ನುಗ್ಗಿದೆ.

ತಾವರೆಕೆರೆ- ಮಡಿಕೇರಿಯಿಂದ ಕುಶಾಲನಗರ ರಸ್ತೆಯ ಮೇಲೆ ನೀರು ನಿಂತಿರುವುದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಪರಿಣಾಮ ಕುಶಾಲನಗರಕ್ಕೆ ಗುಡ್ಡೆಹೊಸೂರು - ಹಾರಂಗಿ ಮಾಗ೯ವಾಗಿ ವಾಹನ ಸಂಚರಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

ಕುಶಾಲನಗರದಲ್ಲಿ ತಗ್ಗು ಪ್ರದೇಶದ ಹಲವು ಬಡಾವಣೆಗಳಿಗೆ ಕಾವೇರಿ ನದಿ ನೀರು ನುಗ್ಗಿದ್ದು, ಅಪಾಯದಂಚಿನಲ್ಲಿರುವ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಭಾಗಮಂಡಲದಲ್ಲಿ ಕುಟುಂಬವೊಂದು ಅಪಾಯದಲ್ಲಿದ್ದು, ರಕ್ಷಣೆಗೆ ಗ್ರಾಮಸ್ಥರು ಮುಂದಾಗಿದ್ದಾರೆ.

ಸಚಿವ ವಿ ಸೋಮಣ್ಣ ಭೇಟಿ: ತಲಕಾವೇರಿಯಲ್ಲಿ ಪರಿಸ್ಥಿತಿ ಕ್ಲಿಷ್ಟವಾಗಿರುವುದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯುಂಟಾಗಿದೆ, ದೇವಸ್ಥಾನದ ಅರ್ಚಕರು ಕಣ್ಮರೆಯಾದ ಮನೆಯ ಸ್ಥಳವು ಸಂಪೂರ್ಣವಾಗಿ ಕೆಸರಿನಿಂದ ತುಂಬಿಹೋಗಿದೆ. ಭಾರೀ ಮಳೆ, ಮಂಜಿನ ಕಾರಣದಿಂದ ರಕ್ಷಣಾ ಕಾರ್ಯ ಸ್ಥಗಿತವಾಗಿದೆ. ಭಾಗಮಂಡಲದಲ್ಲಿ ಕಾವೇರಿ ಪ್ರವಾಹದಿಂದಾಗಿ ಜೆಸಿಬಿ ಸೇರಿದಂತೆ ವಾಹನಗಳು ಅತ್ತ ಕಡೆ ಸಾಗಲಾರದೆ ರಕ್ಷಣಾ ಕಾರ್ಯ ನಡೆಸಲಾಗದ ಸ್ಥಿತಿ ಎದುರಾಗಿದೆ ಎಂದು ಸಚಿವ ಸೋಮಣ್ಣ ಮಾಧ್ಯಮಗಳಿಗೆ ತಿಳಿಸಿದರು.

ಅವರು ಇಂದು ಭೂಕುಸಿತ, ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿ ಪರಿಸ್ಥಿತಿ ಬಗ್ಗೆ ತಿಳಿದುಕೊಂಡರು. ಅವರ ಜೊತೆ ಸಂಸದ ಪ್ರತಾಪ ಸಿಂಹ, ಶಾಸಕರು, ಜಿಲ್ಲಾಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕೂಡ ಇದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT