ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಕೆ.ಆರ್ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಗಳಿವೆ, ಆದರೆ ಆಕ್ಸಿಜನ್ ಕೊರತೆ!

ನಗರದ ಕೆಆರ್ ಆಸ್ಪತ್ರೆಗೆ ಇತ್ತೀಚೆಗೆ ಪಿಎಂ ಕೇರ್ಸ್ ನಿಧಿಯಿಂದ 20 ವೆಂಟಿಲೇಟರ್ ಬಂದಿದ್ದು, ಆದರೆ ಆಸ್ಪತ್ರೆಗೆ ಅವುಗಳನ್ನು ಸ್ಥಾಪಿಸಲು ಆಕ್ಸಿಜನ್ ಪೂರೈಕೆಯೊಂದಿಗೆ ಸಾಕಷ್ಟು ಹಾಸಿಗೆಗಳಿಲ್ಲದ ಕಾರಣ ಅವೆಲ್ಲವನ್ನೂ ಬಳಸಲು ಸಾಧ್ಯವಾಗುತ್ತಿಲ್ಲ.

ಮೈಸೂರು: ನಗರದ ಕೆಆರ್ ಆಸ್ಪತ್ರೆಗೆ ಇತ್ತೀಚೆಗೆ ಪಿಎಂ ಕೇರ್ಸ್ ನಿಧಿಯಿಂದ 20 ವೆಂಟಿಲೇಟರ್ ಬಂದಿದ್ದು, ಆದರೆ ಆಸ್ಪತ್ರೆಗೆ ಅವುಗಳನ್ನು ಸ್ಥಾಪಿಸಲು ಆಕ್ಸಿಜನ್ ಪೂರೈಕೆಯೊಂದಿಗೆ ಸಾಕಷ್ಟು ಹಾಸಿಗೆಗಳಿಲ್ಲದ ಕಾರಣ ಅವೆಲ್ಲವನ್ನೂ ಬಳಸಲು ಸಾಧ್ಯವಾಗುತ್ತಿಲ್ಲ.

ನಿರ್ಣಾಯಕ ಕೋವಿಡ್ -19 ರೋಗಿಗಳಲ್ಲಿ ಜೀವ ಬೆಂಬಲ ವ್ಯವಸ್ಥೆಗಳ ಅಗತ್ಯವನ್ನು ಪರಿಹರಿಸಲು ಪಿಎಂ ಕೇರ್ಸ್ ಅಡಿಯಲ್ಲಿ ಒದಗಿಸಲಾಗುತ್ತಿದೆ. ಕೋವಿಡ್ ಕ್ರಮಗಳ ಭಾಗವಾಗಿ ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆ ಒದಗಿಸಿದ 15 ಸುಧಾರಿತ ವೆಂಟಿಲೇಟರ್‌ಗಳ ಕಥೆಯೂ ಕೂಡ ಇದೇ ಆಗಿದೆ.

ಕೆಆರ್ ಆಸ್ಪತ್ರೆಯಲ್ಲಿ ಕೇವಲ 100 ಹಾಸಿಗೆಗಳು ಆಕ್ಸಿಜನ್ ಪೈಪ್ ಹೊಂದಿದ್ದು, ಅದನ್ನು ವೆಂಟಿಲೇಟರ್‌ಗೆ ಜೋಡಿಸಬೇಕಾಗಿದೆ. ಇವುಗಳನ್ನು ಹೊರತುಪಡಿಸಿ, ಈಗಾಗಲೇ 90 ವೆಂಟಿಲೇಟರ್ ಗಂಬೀರ ಸ್ಥಿತಿಲ್ಲಿರುವ ರೋಗಿಗಳಿಗೆ ಅಳವಡಿಸಲಾಗಿದೆ, ಒಂದು ವೇಳೆ ಅವುಗಳನ್ನು ತೆಗದೆರೇ ರೋಗಿಗಳ ಜೀವಕ್ಕೆ ಅಪಾಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು ಕೋವಿಡ್ ಆಸ್ಪತ್ರೆಗಳಿಗೆ ಪಿಎಂ ಕೇರ್ಸ್ ನಿಧಿಯಿಂದ ಇದುವರೆಗೂ 32 ವೆಂಟಿಲೇಟರ್ ನೀಡಲಾಗಿದ್ದು, ಅವುದ ಅಗತ್ಯವಿದ್ದರೇ   18 ವೆಂಟಿಲೇಟರ್ ಗಳನ್ನು ಇನ್ನೂ ಅಳವಡಿಸಲಾಗಿಲ್ಲ. ಇನ್ನೂ ಹೆಚ್ಚಿನ ಪ್ರಮಾಣದ ಬೆಡ್ ಮತ್ತು ಆಕ್ಸಿಜನ್ ಪೈಪ್ ಆಸ್ಪತ್ರೆಗಳಿಗೆ ಬೇಕಾಗುತ್ತದೆ. ಇನ್ನೂ ಒಂದು ದ್ರವ ಆಮ್ಲಜನಕ ಸ್ಥಾವರವು ಬಹುಕಾಲದಿಂದ ಬಾಕಿ ಉಳಿದಿದೆ ಎಂದು ಮೈಸೂರು ಮೆಡಿಕಲ್ ಕಾಲೇಜು ಸಂಶೋಧನಾ ಸಂಸ್ಥೆಯ ಡಾ.ಸಿ.ಪಿ ನಿರಂಜನ್ ಹೇಳಿದ್ದಾರೆ.

ಆಮ್ಲಜನಕದ ಬೆಂಬಲದೊಂದಿಗೆ ಹಾಸಿಗೆಗಳ ಕೊರತೆಯನ್ನು ಎದುರಿಸುತ್ತಿರುವುದರಿಂದ, ಉಳಿದವುಗಳನ್ನು ನಿರ್ಮಾಣ ಹಂತದಲ್ಲಿರುವ ತುರ್ತು ನಿಗಾ ಘಟಕದಲ್ಲಿ ಸ್ಥಾಪಿಸಲು ಅವರು ಯೋಜಿಸುತ್ತಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT