ಎಡಚಿತ್ರದಲ್ಲಿ ಬಾಲಕಿ ಶ್ರೀದೇವಿಯ ಸಂಗ್ರಹ ಚಿತ್ರ, ಬಲಚಿತ್ರದಲ್ಲಿ ಪೊಲೀಸರ ಶೋಧನೆ 
ರಾಜ್ಯ

ಧಾರವಾಡ: ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆ

ವಾಹದಲ್ಲಿ ಕೊಚ್ಚಿ ಹೋಗಿದ್ದ 8 ವರ್ಷದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗುತ್ತಿದ್ದು ಧಾರವಾಡದ ಕಲಘಟಗಿ ತಾಲ್ಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ 3ನೇ ತರಗತಿ ಬಾಲಕಿ ಶ್ರೀದೇವಿ ತೀವ್ರ ಪ್ರವಾಹಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದಳು.

ಧಾರವಾಡ: ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ 8 ವರ್ಷದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗುತ್ತಿದ್ದು ಧಾರವಾಡದ ಕಲಘಟಗಿ ತಾಲ್ಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ 3ನೇ ತರಗತಿ ಬಾಲಕಿ ಶ್ರೀದೇವಿ ತೀವ್ರ ಪ್ರವಾಹಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದಳು.

ಬಾಲಕಿಯ ಮೃತದೇಹ ಪತ್ತೆಗೆ ಎನ್ ಡಿಆರ್ ಎಫ್ ತಂಡ ಆಗಮಿಸಿ ತೀವ್ರ ಹುಡುಕಾಟ ನಡೆಸಿತ್ತು. ಬಾಲಕಿ ತನ್ನ ತಾಯಿಯ ಜೊತೆ ಹೊಲಕ್ಕೆ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಂದೆಗೆ ಊಟದ ಬುತ್ತಿ ‌ಕೊಡಲು ಶ್ರೀದೇವಿ ಮತ್ತವಳ ತಾಯಿ ತೆರಳುತ್ತಿದ್ದರು. ಈ ವೇಳೆ ರಸ್ತೆ ದಾಟುವಾಗ ಕಾಲು ಜಾರಿದೆ. ರಸ್ತೆಯ ಮೇಲೆ ಹರಿಯುತ್ತಿದ್ದ ನೀರಿನ ರಭಸಕ್ಕೆ ಬಾಲಕಿ ನೀರಲ್ಲಿ ಕೊಚ್ಚಿ ಹೋಗಿದ್ದಾಳೆ.

ಶ್ರೀದೇವಿ ಗಾಣಿಗೇರ್‌ ಳನ್ನು ಮೇಲೆತ್ತಲು ಸ್ಥಳೀಯ ಯುವಕರು ಪ್ರಯತ್ನಿಸಿದರೂ ಪ್ರಯೋಜನವಾಗಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT