ಯಡಿಯೂರಪ್ಪ 
ರಾಜ್ಯ

ಅಯೋಧ್ಯೆಯಲ್ಲಿ ಕರ್ನಾಟಕಕ್ಕೆ 2 ಎಕರೆ ಜಾಗ ನೀಡಿ: ಉತ್ತರ ಪ್ರದೇಶ ಸಿಎಂಗೆ ಯಡಿಯೂರಪ್ಪ ಪತ್ರ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ

ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಸಿಎಂ ಯಡಿಯೂರಪ್ಪ, ಇದೇ ತಿಂಗಳ 5ನೇ ತಾರೀಖು ನಡೆದ ರಾಮಮಂದಿರಕ್ಕೆ ಅಡಿಗಲ್ಲು ಕಾರ್ಯಕ್ರಮದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಸಿಎಂ ಬಿಎಸ್​ವೈ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ಕರ್ನಾಟಕ ರಾಜ್ಯದಿಂದ ಅಯೋಧ್ಯೆಗೆ ಸಾವಿರಾರು ಜನರು ಭೇಟಿ ನೀಡುತ್ತಾರೆ. ಹಾಗಾಗಿ  ಅಯೋಧ್ಯೆಯಲ್ಲಿ ಕರ್ನಾಟಕ ಸರ್ಕಾರಕ್ಕೆ 2 ಎಕರೆ ಭೂಮಿ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ರಾಜ್ಯದಿಂದ ಅಯೋಧ್ಯೆಗೆ ಭಕ್ತರು ಭೇಟಿ ನೀಡುತ್ತಾರೆ. ಅವರಿಗಾಗಿ ಯಾತ್ರಿ ನಿವಾಸ ನಿರ್ಮಾಣ ಮಾಡಬೇಕಾಗಿದೆ. ಈ ಉದ್ದೇಶದಿಂದ ಕರ್ನಾಟಕಕ್ಕೆ ಉತ್ತರಪ್ರದೇಶ ಸರ್ಕಾರ ಎರಡು ಎಕರೆ ಜಾಗ ನೀಡಬೇಕು ಎಂದು  ಸಿಎಂ ಯಡಿಯೂರಪ್ಪ  ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT