ಆನೆ ಜೊತೆ ಮಾವುತ ಹರೀಶ್ 
ರಾಜ್ಯ

ಮಾವುತನನ್ನೇ ತುಳಿದು ಕೊಂದ ಆನೆ: ಮೈಸೂರು ಮೃಗಾಲಯದಲ್ಲಿ ದುರ್ಘಟನೆ

ವಿಶ್ವವಿಖ್ಯಾತ ಚಾಮರಾಜೇಂದ್ರ ಮೃಗಾಲಯದಲ್ಲಿ ದುರಂತ ಸಂಭವಿಸಿದ್ದು, ಆನೆಯೊಂದು ತನ್ನ ಮಾವುತನನ್ನೇ ತುಳಿದು ಸಾಯಿಸಿರುವ ಘಟನೆ ನಡೆದಿದೆ.

ಮೈಸೂರು: ವಿಶ್ವವಿಖ್ಯಾತ ಚಾಮರಾಜೇಂದ್ರ ಮೃಗಾಲಯದಲ್ಲಿ ದುರಂತ ಸಂಭವಿಸಿದ್ದು, ಆನೆಯೊಂದು ತನ್ನ ಮಾವುತನನ್ನೇ ತುಳಿದು ಸಾಯಿಸಿರುವ ಘಟನೆ ನಡೆದಿದೆ.

ಹರೀಶ್ (38) ಮೃತಪಟ್ಟ ಮಾವುತ. ಅಭಿಮನ್ಯು ಹೆಸರಿನ ಆನೆಗೆ ಶುಕ್ರವಾರ ಮಧ್ಯಾಹ್ನ ಹರೀಶ್‌ ಅವರು ಹುಲ್ಲು ಹಾಕಿ ಗಾಯ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಹರೀಶ್‌ ಅವರನ್ನು ಸೊಂಡಿಲಿನಿಂದ ಎತ್ತಿ ಕೆಳಕ್ಕೆ ಹಾಕಿ ತುಳಿದಿದೆ.

ಈ ವಿಚಾರ ತಿಳಿದ ಕೂಡಲೇ ಅಲ್ಲಿದ್ದ ಸಿಬ್ಬಂದಿ ಹರೀಶ್‌ ಅವರನ್ನು ಆನೆಯಿಂದ ಬಿಡಿಸಿಕೊಂಡು ಕೂಡಲೇ ಗೋಪಾಲಗೌಡ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹರೀಶ್‌ ಮೃತಪಟ್ಟಿದ್ದಾರೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ.

"ಹರೀಶ್ ಅವರು 16 ವರ್ಷದ ಅಭಿಮನ್ಯು ಆನೆಯನ್ನು ಬಹಳ ಸಮಯದಿಂದ ನೋಡಿಕೊಳ್ಳುತ್ತಿದ್ದರು. ಆದರೆ, ಶುಕ್ರವಾರ ಸಂಜೆ ಆನೆಯ ಗಾಯವನ್ನು ಸ್ವಚ್ಛಗೊಳಿಸುವಾಗ ಆಕಸ್ಮಿಕವಾಗಿ ಅವರ ಮೇಲೆ ಹಲ್ಲೆ ನಡೆಸಿದೆ. ಅವರು 2002 ರಿಂದ ಮೈಸೂರು ಮೃಗಾಲಯದಲ್ಲಿ ಕೆಲಸ ಮಾಡುತ್ತಿದ್ದರು. ಪ್ರಾಣಿಗಳನ್ನು ವಿಶೇಷವಾಗಿ ಆನೆಗಳನ್ನು ನೋಡಿಕೊಳ್ಳುತ್ತಿದ್ದರು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT