ಸಾಂದರ್ಭಿಕ ಚಿತ್ರಗಳು 
ರಾಜ್ಯ

ಕೊರೋನಾ ಸಂಕಷ್ಟದ ಸಂದರ್ಭದಲ್ಲಿ 59 ಅಭ್ಯರ್ಥಿಗಳಿಗೆ ಕೆಲಸ ಕೊಟ್ಟ 13 ಕಂಪನಿಗಳು!

ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಬಹುತೇಕ ಸಂಸ್ಥೆಗಳನ್ನು ಕೆಲಸಗಾರರನ್ನು ತೆಗೆಯುತ್ತಿದ್ದರೆ , 13 ಕಂಪನಿಗಳು ಹೊಸ ಉದ್ಯೋಗಿಗಳನ್ನು ಕೆಲಸಕ್ಕೆ ನೇಮಕ ಮಾಡಿಕೊಂಡಿವೆ.

ಬೆಂಗಳೂರು: ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಬಹುತೇಕ ಸಂಸ್ಥೆಗಳನ್ನು ಕೆಲಸಗಾರರನ್ನು ತೆಗೆಯುತ್ತಿದ್ದರೆ , 13 ಕಂಪನಿಗಳು ಹೊಸ ಉದ್ಯೋಗಿಗಳನ್ನು ಕೆಲಸಕ್ಕೆ ನೇಮಕ ಮಾಡಿಕೊಂಡಿವೆ.ಕಳೆದ ತಿಂಗಳು ಚಾಲನೆಗೊಂಡ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಜಾಬ್ ಪೋರ್ಟಲ್  (https://skillconnect.kaushalkar.com)ನೆರವಿಂದ ಕಳೆದ ಕೆಲವು ವಾರದಿಂದೀಚಿಗೆ ವಿದೇಶದಿಂದ ರಾಜ್ಯಕ್ಕೆ ಮರಳಿದವರು ಸೇರಿದಂತೆ 59 ಅಭ್ಯರ್ಥಿಗಳು ಕೆಲಸ ಪಡೆದುಕೊಂಡಿದ್ದಾರೆ. ಈ ರಾಜ್ಯಸರ್ಕಾರದ ಇಂತಹ ಕಾರ್ಯಕ್ರಮ ದೇಶದಲ್ಲಿಯೇ ಮೊದಲನೇಯದಾಗಿದೆ.

ಜುಲೈ ಎರಡನೇ ವಾರದಲ್ಲಿ ಆಯೋಜಿಸಲಾಗಿದ್ದ  ಉದ್ಯೋಗ ಮೇಳದಲ್ಲಿ ನೋಂದಣಿಯಾಗಿದ್ದ 53 ಕಂಪನಿಗಳ ಪೈಕಿ ಹೋಟೆಲ್, ಹೇಲ್ತ್ ಕೇರ್ ನಂತಹ 13 ಕಂಪನಿಗಳು ಪಾಲ್ಗೊಂಡು, 59 ಅಭ್ಯರ್ಥಿಗಳನ್ನು ಕೆಲಸಕ್ಕೆ ನೇಮಿಸಿಕೊಂಡಿವೆ. ಸುಮಾರು 938 ಅಭ್ಯರ್ಥಿಗಳು ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಂಪನಿಗಳ ಅವಶ್ಯಕತೆ ಆಧಾರದ ಮೇಲೆ ಅಭ್ಯರ್ಥಿಗಳ ಕಿರುಪಟ್ಟಿಯನ್ನು ತಯಾರಿಸಲಾಗಿತ್ತು. ಉದ್ಯೋಗಿಗಳು ಈಗಾಗಲೇ ನೇಮಕಾತಿ ಪತ್ರ ಪಡೆದಿದ್ದು, ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ.  ವಿವಿಧ ಹಂತಗಳಲ್ಲಿ 863 ಜನರ ನೇಮಕ ಕೂಡಾ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನೌಕರಿ ಡಾಟ್ ಕಾಮ್ ರೀತಿಯಲ್ಲಿ ಪೋರ್ಟಲ್ ನ್ನು ಮೇಲ್ದರ್ಜೇಗೇರಿಸಲು ಸರ್ಕಾರ ಇದೀಗ ಯೋಜಿಸಿದೆ. ಕಂಪನಿಗಳು ಅಗತ್ಯವಿರುವ ಖಾಲಿ ಹುದ್ದೆಗಳ ಬಗ್ಗೆ ತಿಳಿಸಲು ಈ ಆನ್ ಲೈನ್ ನಿಂದ ಸುಲಭವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT