ಸಚಿವ ಗೋಪಾಲಯ್ಯ 
ರಾಜ್ಯ

ಹೇಮಾವತಿ ಜಲಾಶಯ ಪರಿಶೀಲಿಸಿದ ಸಚಿವ ಗೋಪಾಲಯ್ಯ: ಕೆರೆ, ಕಟ್ಟೆ, ನಾಲೆಗಳಿಗೆ ನೀರು ಬಿಡಲು ಸೂಚನೆ 

ಹೇಮಾವತಿ ಜಲಾನಯನ ಪ್ರದೇಶಗಳ ಕೆರೆ-ಕಟ್ಟೆಗಳನ್ನು ತುಂಬಿಸಲು ಹಾಗೂ ಇತರ ಜಿಲ್ಲೆಗಳಿಗೆ ನಾಲೆಗಳ ಮೂಲಕ ನೀರನ್ನು ಹರಿಬಿಡಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹಾಸನ: ಹೇಮಾವತಿ ಜಲಾನಯನ ಪ್ರದೇಶಗಳ ಕೆರೆ-ಕಟ್ಟೆಗಳನ್ನು ತುಂಬಿಸಲು ಹಾಗೂ ಇತರ ಜಿಲ್ಲೆಗಳಿಗೆ ನಾಲೆಗಳ ಮೂಲಕ ನೀರನ್ನು ಹರಿಬಿಡಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ಗೊರೂರಿನ ಹೇಮಾವತಿ ಜಲಾಶಯಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ, ಜಲಾಶಯದ ಇಂಜಿನಿ ಯರ್ ಗಳೊಂದಿಗೆ ಮಾತನಾಡಿದರು.ಜಲಾಶಯಕ್ಕೆ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಮುನ್ನೆಚ್ಚರಿ ಕೆ ಕ್ರಮವಾಗಿ ಹೆಚ್ಚುವರಿ ನೀರನ್ನು ಹರಿಬಿಡಲು ತಿಳಿಸಿದರು.

ಹೇಮಾವತಿ ಜಲಾಶಯಕ್ಕೆ ಒಳಪಡುವ ಜಿಲ್ಲೆಗಳಾದ ತುಮಕೂರು ಹಾಸನ ಹಾಗೂ ಮಂಡ್ಯ ಜಿಲ್ಲೆಗಳಿಗೆ ಕೆರೆಕಟ್ಟೆಗಳ ನೀರು ತುಂಬಿಸಲು ನಾಲೆಗಳಿಗೆ ನೀರನ್ನು ಬಿಡುವಂತೆ ಸೂಚನೆ ನೀಡಿದರು.

ಹೇಮಾವತಿ ಜಲಾಶಯಕ್ಕೆ ಈಗಾಗಲೇ ೫೦ ಸಾವಿರ ಕ್ಯೂಸೆಕ್ಸ್ ನೀರು ಒಳಹರಿವಿದ್ದು ೨೦ ಸಾವಿರ ಕ್ಯೂಸೆಕ್ಸ್ ನೀರು ನಾಲೆ ಹಾಗೂ ನದಿಗೆ ಹರಿಬಿಡಲಾಗುತ್ತಿದೆ.ಮತ್ತೊಂದೆಡೆ ಜಿಲ್ಲೆಯ ಸಕಲೇಶಪುರ,ಅರಕಲಗೂಡು,ಬೇಲೂ ರು,ಹಳೇ ಬೀಡು,ಆಲೂರು ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹಳ್ಳ,ಕೊಳ್ಳಗಳು,ಹೇಮಾವತಿ ನದಿ ತುಂಬಿ ಹರಿಯುತ್ತಿದ್ದು ತಗ್ಗು ಪ್ರದೇಶದಲ್ಲಿರುವ ಸಾರ್ವಜನಿಕರ ಎಚ್ಚರಿಕೆವಹಿಸುವಂತೆ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT