ರಾಜ್ಯ

ತಲಕಾವೇರಿ ಭೂಕುಸಿತ:ಶೋಧ ಕಾರ್ಯಾಚರಣೆ ಪುನರಾರಂಭ, ಒಂದು ಮೃತದೇಹ ಪತ್ತೆ

ಕೊಡಗಿನ ತಲಕಾವೇರಿ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಿಲುಕಿರುವ ಐವರ ಶೋಧ ಕಾರ್ಯಾಚರಣೆ ಶನಿವಾರ ಮಧ್ಯಾಹ್ನ ಪುನರಾರಂಭಗೊಂಡಿದ್ದು, ಒಂದು ಮೃತದೇಹವನ್ನು ಮಣ್ಣಿನ ಅವಶೇಷಗಳಿಂದ ಹೊರತೆಗೆಯಲಾಗಿದೆ.

ಮಡಿಕೇರಿ:  ಕೊಡಗಿನ ತಲಕಾವೇರಿ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಿಲುಕಿರುವ ಐವರ ಶೋಧ ಕಾರ್ಯಾಚರಣೆ ಶನಿವಾರ ಮಧ್ಯಾಹ್ನ ಪುನರಾರಂಭಗೊಂಡಿದ್ದು, ಒಂದು ಮೃತದೇಹವನ್ನು ಮಣ್ಣಿನ ಅವಶೇಷಗಳಿಂದ ಹೊರತೆಗೆಯಲಾಗಿದೆ.

ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಅಗೆಯುವ ಯಂತ್ರವನ್ನು ಸ್ಥಳಾಂತರಿಸುವಲ್ಲಿ ರಕ್ಷಣಾ ಸಿಬ್ಬಂದಿ ತೊಂದರೆ ಅನುಭವಿಸಿದ ನಂತರ, ನಾಪತ್ತೆಯಾದವರ ಶೋಧ ಕಾರ್ಯಗಳು ಸ್ಥಗಿತಗೊಂಡಿದ್ದವು ಎಂದು ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಮಧ್ಯಾಹ್ನ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದ್ದು, ಎನ್‌ಡಿಆರ್‌ಎಫ್ ಸಿಬ್ಬಂದಿ ಒಂದು ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ.

ಮೃತರನ್ನು ತಲಕಾವೇರಿ ದೇವಾಲಯದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಅಣ್ಣಆನಂದ ತೀರ್ಥ(86)  ಎಂದು ಗುರುತಿಸಲಾಗಿದೆ.

ಇದೀಗ  ನಾರಾಯಣ ಆಚಾರ್ ಕುಟುಂಬದ ಇನ್ನೂ ನಾಲ್ವರ ಶೋಧಕಾರ್ಯಾಚರಣೆ ಮುಂದುವರಿದಿದೆ. ಆದರೆ ಭಾರೀ ಮಳೆ ಕಾರಣಕ್ಕಾಗಿ ಆಗಾಗ ಶೋಧ ಕಾರ್ಯಾಚರಣೆಗೆ ಅಡ್ಡಿ ಉಂಟಾಗುತ್ತಿದೆ,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT