ಸಿಎಂ ಯಡಿಯೂರಪ್ಪ 
ರಾಜ್ಯ

ಶ್ರೀಕೃಷ್ಣ ಜನ್ಮಾಷ್ಟಮಿ: ಮುಖ್ಯಮಂತ್ರಿ, ಗಣ್ಯರಿಂದ ಶುಭಾಶಯ

ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಭಗವಂತ ಶ್ರೀಕೃಷ್ಣ ಜಗತ್ತಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ, ಎಲ್ಲರಿಗೂ ಸುಖ, ಆರೋಗ್ಯ, ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭ ಹಾರೈಸಿದ್ದಾರೆ.

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಭಗವಂತ ಶ್ರೀಕೃಷ್ಣ ಜಗತ್ತಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ, ಎಲ್ಲರಿಗೂ ಸುಖ, ಆರೋಗ್ಯ, ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭ ಹಾರೈಸಿದ್ದಾರೆ.

ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಭಕ್ತಿಪೂರ್ವಕ ಶುಭಕಾಮನೆಗಳು. ಭಕ್ತರ ದುಃಖಗಳನ್ನು ಪರಿಹರಿಸಲು ಅವತಾರ ತಾಳಿದ ಭಗವಂತ ಶ್ರೀಕೃಷ್ಣ, ಜಗತ್ತಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ, ಎಲ್ಲರಿಗೂ ಸುಖ, ಆರೋಗ್ಯ, ನೆಮ್ಮದಿಯನ್ನು ಕರುಣಿಸಲಿ, ಸುದರ್ಶನ ಚಕ್ರಧಾರಿಯಾಗಿ ಎಲ್ಲ ಆಪತ್ತುಗಳಿಂದ ರಕ್ಷಿಸಲಿ ಎಂದು ಪ್ರಾರ್ಥಿಸೋಣ ಎಂದು ಮುಖ್ಯಮಂತ್ರಿ ಟ್ವೀಟ್‌ ಮಾಡಿದ್ದಾರೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು, ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಪವಿತ್ರ ಗೋಕುಲಾಷ್ಟಮಿಯು, ನಾಡಿಗೆ ಬಂದೊದಗಿರುವ ಕೊರೊನ ಸೋಂಕು ಮತ್ತು ಅತಿವೃಷ್ಟಿಯ ವಿರುದ್ಧ ಹೋರಾಡಲು ಧನಾತ್ಮಕ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಸಂದೇಶದ ಮೂಲಕ ಶುಭ ಹಾರೈಸಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್‌ ಮಾಡಿ, ಎಲ್ಲರಿಗೂ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಬಾಲ್ಯದಲ್ಲಿ ಮುದ್ದುಕೃಷ್ಣನಾಗಿ, ತಾರುಣ್ಯದಲ್ಲಿ ಮುರಳಿ ಮೋಹನನಾಗಿ, ಧರ್ಮಯುದ್ಧದಲ್ಲಿ ಪಾರ್ಥ ಸಾರಥಿಯಾಗಿ, ಭಗವದ್ಗೀತೆ ಬೋಧಿಸಿದ ಗೀತಾಚಾರ್ಯನಾಗಿ ನಮ್ಮೆಲ್ಲರ ಆರಾಧ್ಯ ದೈವವಾಗಿರುವ ಶ್ರೀಕೃಷ್ಣ ಪರಮಾತ್ಮನ ಅನುಗ್ರಹ ನಮ್ಮ ಮೇಲೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿ, ವಸುದೇವ ಸುತಂ ದೇವಂ ಕಂಸ ಚಾಣೂರ ಮರ್ದನಮ್ | ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಮ್ || ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಠಮಿಯ ಶುಭಾಶಯಗಳು ಎಂದು ತಿಳಿಸಿದ್ದಾರೆ.

ವಸತಿ ಸಚಿವ ವಿ.ಸೋಮಣ್ಣ, ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಭಗವಂತ ಶ್ರೀಕೃಷ್ಣ ಜಗತ್ತಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ, ಎಲ್ಲರಿಗೂ ಸುಖ, ಆರೋಗ್ಯ, ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಅದೇ ರೀತಿ ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಅನೇಕ ಸಚಿವರು ಶುಭಾಶಯ ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT