ಬೈಕ್ ಸವಾರ ಸಾವು 
ರಾಜ್ಯ

ಮಂಗಳೂರು: ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನ!

ರಾಜ್ಯದಲ್ಲಿ ಮಳೆ ಅವಾಂತರ ಸರಣಿ ಮುಂದುವರೆದಿದ್ದು, ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನವಾದ ಧಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು: ರಾಜ್ಯದಲ್ಲಿ ಮಳೆ ಅವಾಂತರ ಸರಣಿ ಮುಂದುವರೆದಿದ್ದು, ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನವಾದ ಧಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಒಂದೆಡೆ ಭೂಕುಸಿತ, ಪ್ರವಾಹದಿಂದಾಗಿ ಜನ ಸಂಕಷ್ಟಕ್ಕೀಡಾಗಿದ್ದರೆ ಮತ್ತೊಂದೆಡೆ ಮಳೆ ಸಂಬಂಧಿತ ದುರಂತಗಳ ಸರಣಿ ಕೂಡ ಮುಂದುವರೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಡ್ಪಿನಂಗಡಿ ಬಳಿ ರಸ್ತೆ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ  ನಡೆದಿದೆ.

ಬಲ್ಪ ಗ್ರಾಮದ ನೆಂಟರ ಮನೆಯಿಂದ ಬೆಳ್ಳಂಬೆಳಿಗ್ಗೆ ಬೈಕ್ ನಲ್ಲಿ ಹೊರಟಿದ್ದ ಸುಳ್ಯ ತಾಲೂಕಿನ ಅಜ್ಜಾವರ ನಿವಾಸಿ, ಮುರಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದಿದ್ದಾನೆ. ಈ ವೇಳೆ ವಿದ್ಯುತ್ ಪ್ರವಹಿಸಿದ್ದು, ಬೈಕ್ ಸಮೇತ ಸವಾರ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಬೈಕ್ ಟ್ಯಾಂಕ್ ನಲ್ಲಿದ್ದ ಪೆಟ್ರೋಲ್ ಲೀಕ್ ಆಗಿದ್ದು, ಬೆಂಕಿಯ  ಕೆನ್ನಾಲಿಗೆ ಇಡೀ ಬೈಕ್ ಗೆ ಆವರಿಸಿದೆ. ಅಲ್ಲದೆ ಮಳೆ ಬಂದಿದ್ದ ಪರಿಣಾಮ ಸವಾರ ಮತ್ತು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಮೂಲಗಳ ಪ್ರಕಾರ ಈತ ಹಾಲು ಕರೆಯಲು ಅಜ್ಜಾವರ ಭಾಗಕ್ಕೆ ಹೊರಟಿದ್ದ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT