ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಕಲಿ ವಾಟ್ಸಾಪ್ ಖಾತೆ ಸೃಷ್ಟಿಸಿ ವಂಚನೆ; ಆರೋಪಿ ಬಂಧನ

ನಕಲಿ ವಾಟ್ಸಾಪ್ ಖಾತೆ ಸೃಷ್ಟಿ ವಂಚಿಸುತ್ತಿದ್ದ ವ್ಯಕ್ತಿ ಯೋರ್ವನನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸಮೀರ್ ಕುಮಾರ್ (25) ಬಂಧಿತ ಆರೋಪಿ

ಬೆಂಗಳೂರು: ನಕಲಿ ವಾಟ್ಸಾಪ್ ಖಾತೆ ಸೃಷ್ಟಿ ವಂಚಿಸುತ್ತಿದ್ದ ವ್ಯಕ್ತಿ ಯೋರ್ವನನ್ನು ಪೂರ್ವ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸಮೀರ್ ಕುಮಾರ್ (25) ಬಂಧಿತ ಆರೋಪಿ.

ಮಂಜುಳಾ ಎಂಬುವವರು, ತಮ್ಮ ಹೆಸರಿನಲ್ಲಿ ನಕಲಿ ವಾಟ್ಸಾಪ್ ಖಾತೆ ಸೃಷ್ಟಿಸಿ ಯಾರೋ ಒಬ್ಬರು ನಮ್ಮ ತಾಯಿಯ ಚಿಕಿತ್ಸೆ ಗೆ ಹಣ ಬೇಕಾಗಿದ್ದು, ಕೂಡಲೇ ನೀಡಿದ ಬ್ಯಾಂಕ್ಖಾತೆಗೆ ಹಣ ವರ್ಗಾವಣೆ ಮಾಡಿ ಎಂದು ತಮ್ಮ ಸಹೋದ್ಯೋಗಿಗೆ ಸಂದೇಶ ರವಾನಿಸಿದ್ದಾರೆ. ಹೀಗಾಗಿ ಅವರು ತಮ್ಮ ಪೆಟಿಎಂ ಖಾತೆಯಿಂದ 4,500ರೂ. ಹಣ ವರ್ಗಾವಣೆ ಮಾಡಿದ್ದರು. ಈ ಬಗ್ಗೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರೋಪಿ ಪ್ರಸ್ತುತ ಮಾರ್ಚ್ ತಿಂಗಳಲ್ಲಿ ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದನು. ಆ ಸಮಯದಲ್ಲಿ ಇಂದಿರಾನಗರದ ಖಾಸಗಿ ಕಂಪನಿಯಿಂದ ಸಂದರ್ಶನವೊಂದಕ್ಕೆ‌ಹಾಜರಾಗುವಂತೆ ಆತನಿಗೆ ಕರೆ ಬರುತ್ತದೆ. ಆ ಸಂದರ್ಭದಲ್ಲಿ ಆತ ಕಂಪನಿಯ ಉದ್ಯೋಗಿಗಳ ವಿವರಗಳನ್ನು ಗೂಗಲ್ ನಿಂದ ಸಂಗ್ರಹಿಸಿ ಪಿರ್ಯಾದುದಾರರ ಭಾವಚಿತ್ರ ವಿರುವ ನಕಲಿ ವಾಟ್ಸಾಪ್ ಪ್ರೊಪೈಲ್ ಸೃಷ್ಟಿಸಿ ಅವರ ಸಹದ್ಯೋಗಿಗಳಿಂದ ಹಣಕ್ಕೆ ಬೇಡಿಕೆ ಇಡುತ್ತಿದ್ದ.

ಜೀವನ ನಿರ್ವಹಣೆ ಗಾಗಿ ಆತ ಈ ಮಾರ್ಗ ಕಂಡುಕೊಂಡಿದ್ದ ಎಂದು ತನಿಖೆ ವೇಳೆ ಆರೋಪಿ ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಇನ್ಸ್ ಪೆಕ್ಟರ್ ಅನೀತಾ ಕುಮಾರಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘಕಾಲ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT