ಸಚಿವ ಅಶೋಕ್ 
ರಾಜ್ಯ

ಹೆಚ್ಚು ಪ್ರವಾಹ ಪರಿಸ್ಥಿತಿ ಎದುರಾಗುವ 10 ಜಿಲ್ಲೆಗಳಲ್ಲಿ ಶಾಶ್ವತ ಪುನಶ್ಚೇತನ ಭವನ ನಿರ್ಮಾಣ: ಸಚಿವ ಆರ್.ಅಶೋಕ್

ರಾಜ್ಯದಲ್ಲಿ ಹೆಚ್ಚು ಪ್ರವಾಹ ಪರಿಸ್ಥಿತಿ ಎದುರಿಸುವ 10 ಜಿಲ್ಲೆಯಲ್ಲಿ ಶಾಶ್ವತವಾಗಿ ಪುನಶ್ಚೇತನ ಭವನ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಪ್ರವಾಹ ಪರಿಸ್ಥಿತಿ ಎದುರಿಸುವ 10 ಜಿಲ್ಲೆಯಲ್ಲಿ ಶಾಶ್ವತವಾಗಿ ಪುನಶ್ಚೇತನ ಭವನ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ. 

ಕರ್ನಾಟಕ ಸೇರಿದಂತೆ ಪ್ರವಾಹ ಪೀಡಿತ ರಾಜ್ಯಗಳ ಜೊತೆ ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಸಂವಾದ ನಡೆಸಿದರು, 

ಪ್ರಧಾನಿ ಮೋದಿಯವರೊಂದಿಗೆ ವಿಡಿಯೋ ಸಂವಾದದಲ್ಲಿ ಮಾತನಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶೋಕ್ ಅವರು, ಹೆಚ್ಚು ಪ್ರವಾಹ ಪರಿಸ್ಥಿತಿ ಎದುರಾಗುವ 10 ಜಿಲ್ಲೆಯಲ್ಲಿ ಶಾಶ್ವತವಾಗಿ ಪುನಶ್ಚೇತನ ಭವನ ನಿರ್ಮಿಸಲು ನಿರ್ಧರಿಸಲಾಗಿದೆ. ಭವನದಲ್ಲಿ ಆಸ್ಪತ್ರೆ, ಗ್ರಂಥಾಲಯ, ವಾಸ್ತವ್ಯ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆ ಿರಲಿದೆ. ಇದಕ್ಕಾಗಿ ರೂ.200 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. 

ಪ್ರವಾಹ ಸಂತ್ರಸ್ತರು ಆರೋಗ್ಯದ ದೃಷ್ಟಿಯಿಂದ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಬೇಕು. ರ್ಯಾಪಿಡ್ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಕೋವಿಡ್ ಸೋಂಕಿತರಿಗೆ ಪ್ರತ್ಯೇಕ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. 

ನೆರೆ ಸಂತ್ರಸ್ತರಿಗೆ ಪೌಷ್ಟಿಕ ಆಹಾರ
ಪ್ರವಾಹ ಸಂತ್ರಸ್ತರಿಗೆ ಕಾಳಜಿ ಕೇಂದ್ರದಲ್ಲಿ ಪೌಷ್ಠಿಕಾಂಶ ಆಹಾರ ನೀಡಲು ನಿರ್ಧರಿಸಲಾಗಿದ್ದು, ಮಧ್ಯಾಹ್ನ ಮತ್ತು ರಾತ್ರಿ ಊಟದ ಜೊತೆಗೆ ಮೊಟ್ಟೆ, ಉಪ್ಪಿನಕಾಯಿ, ಪಲ್ಯ, ಮೊಸಲು ನೀಡಲಾಗುವುದು ಎಂದು ತಿಳಿಸಿದ್ದಾರೆ. 

ಪ್ರವಾಸ ಸಂತ್ರಸ್ತರಿಗೆ ಕೇವಲ ಅನ್ನ ಸಂಬಾರು ಮಾತ್ರ ನೀಡಲಾಗುತ್ತಿತ್ತು. ನೊಂದು ಬಂದಿರುವ ಜನರಿಗೆ ಕೇವಲ ಅನ್ನ ಸಂಬಾರು ನೀಡುವುದು ಸರಿಯಲ್ಲ. ನೊಂದವರಿಗೆ ಪೌಷ್ಟಿಕಾಂಶದ ಆಹಾರ ನೀಡುವುದು ಮುಖ್ಯ ಎಂಬುದನ್ನು ಅರಿತು ಇನ್ನು ಮುಂದೆ ಮಧ್ಯಾಹ್ನ ಹಾಗೂ ರಾತ್ರಿ ಊಟದ ವೇಳೆ ಮೊಟ್ಟೆ, ಉಪ್ಪಿನಕಾಯಿ, ಪಲ್ಯ, ಮೊಸಲು ನೀಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ. 

2019ರ ಪ್ರವಾಹ ಪರಿಸ್ಥಿತಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, 2019ರಲ್ಲಿ ಮಳೆಯಿಂದಾಗಿ ಮನೆ ಬಿದ್ದವರಿಗೆ ಹಣ ನೀಡಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಆದರೆ, ಸರ್ಕಾರವು 21 ಜಿಲ್ಲೆಗಳಿಗೆ ರೂ.334.29 ಕೋಟಿ ಬಿಡುಗಡೆ ಮಾಡಿದೆ ಎಂದು ಜಿಲ್ಲಾವಾರು ಮಾಹಿತಿ ನೀಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT