ಭಾಗಮಂಡಲದಲ್ಲಿನ ಭೂ ಕುಸಿತ ಪ್ರದೇಶದಲ್ಲಿ ಶೋಧ ಕಾರ್ಯ 
ರಾಜ್ಯ

ತಲಕಾವೇರಿ: ನಾಪತ್ತೆಯಾಗಿರುವ ಅರ್ಚಕರ ಪುತ್ರಿಯರು ವಿದೇಶದಿಂದ ಆಗಮನ, ಕ್ವಾರಂಟೈನ್‌

ನಾಪತ್ತೆಯಾಗಿರುವ ಕೊಡಗು ಜಿಲ್ಲೆಯ ತಲಕಾವೇರಿ ದೇಗುಲದ ಅರ್ಚಕರು ಇಬ್ಬರು ಪುತ್ರಿಯರು ಆಸ್ಟ್ರೇಲಿಯಾಮತ್ತು ನ್ಯೂಜಿಲೆಂಡ್‌ನಿಂದ ಮಡಿಕೇರಿಗೆ ಆಗಮಿಸಿದ್ದು, ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಮಡಿಕೇರಿ: ನಾಪತ್ತೆಯಾಗಿರುವ ಕೊಡಗು ಜಿಲ್ಲೆಯ ತಲಕಾವೇರಿ ದೇಗುಲದ ಅರ್ಚಕರು ಇಬ್ಬರು ಪುತ್ರಿಯರು ಆಸ್ಟ್ರೇಲಿಯಾ
ಮತ್ತು ನ್ಯೂಜಿಲೆಂಡ್‌ನಿಂದ ಮಡಿಕೇರಿಗೆ ಆಗಮಿಸಿದ್ದು, ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಈ ಇಬ್ಬರು ಯುವತಿಯರನ್ನು ವಿಮಾನ ನಿಲ್ದಾಣದಿಂದ ಕೊಡಗಿಗೆ ಕೊಂಡೊಯ್ದ ವಾಹನದ ಚಾಲಕನಿಗೆ ಸೋಂಕು ದೃಢಪಟ್ಟ 
ಹಿನ್ನೆಲೆಯಲ್ಲಿ ಅವರನ್ನು ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗಿದೆ. 

ಅವರ ತಂದೆ ಹಾಗೂ ತಲಕಾವೇರಿ ದೇಗುಲದ ಮುಖ್ಯ ಅರ್ಚಕ ನಾರಾಯಣ ಆಚಾರ್‌ ಅವರು ಕಳೆದ ವಾರ ಸಂಭವಿಸಿದ
 ಭೂಕುಸಿತದಲ್ಲಿ ನಾಪತ್ತೆಯಾಗಿದ್ದಾರೆ.

ಈ ಭೂಕುಸಿತದಲ್ಲಿ ಐವರು ನಾಪತ್ತೆಯಾಗಿದ್ದು, ದೇಗುಲದ ಆಡಳಿತಕಾರ ಹಾಗೂ ನಾರಾಯಣ ಅವರ ಸಹೋದರ  ಆನಂದ ತೀರ್ಥ ಸ್ವಾಮಿಯ ಮೃತ ದೇಹ ಪತ್ತೆಯಾಗಿತ್ತು.  ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್‌ನಲ್ಲಿರುವ ನಾರಾಯಣ ಅವರ ಇಬ್ಬರು ಪುತ್ರಿಯರು ಸೋಮವಾರ ಭಾರತಕ್ಕೆ ಆಗಮಿಸಿದ್ದರು. 

ಕೊಡಗು ಜಿಲ್ಲೆಯಲ್ಲಿ ಇಲ್ಲಿಯವರೆಗೆ 701 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 262 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT