ಸಿಎಂ ಯಡಿಯೂರಪ್ಪ 
ರಾಜ್ಯ

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಭರವಸೆ ನೀಡಿದ ಸಿಎಂ ಯಡಿಯೂರಪ್ಪ, ಶಾಂತಿ ಕಾಪಾಡುವಂತೆ ಜನತೆಗೆ ಮನವಿ

ರಾಜಧಾನಿಯ ಕಾವಲ್ ಭೈರಸಂದ್ರದಲ್ಲಿ ಮಂಗಳವಾರ ತಡರಾತ್ರಿ ನಡೆದ ವ್ಯಾಪಕ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಶಾಂತಿಯುತವಾಗಿರುವಂತೆ ರಾಜ್ಯದ ಜನತೆ ಬಳಿ ಬುಧವಾರ ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು: ರಾಜಧಾನಿಯ ಕಾವಲ್ ಭೈರಸಂದ್ರದಲ್ಲಿ ಮಂಗಳವಾರ ತಡರಾತ್ರಿ ನಡೆದ ವ್ಯಾಪಕ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಶಾಂತಿಯುತವಾಗಿರುವಂತೆ ರಾಜ್ಯದ ಜನತೆ ಬಳಿ ಬುಧವಾರ ಮನವಿ ಮಾಡಿಕೊಂಡಿದ್ದಾರೆ. 

ಇಸ್ಲಾಂ ಧರ್ಮಗುರು ಮಹಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿ ಪೋಸ್ಟ್ ಮಾಡಲಾಗಿದೆ ಎಂದು ನಿನ್ನೆ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು.

ಈ ಸಂಬಂಧ ಹೇಳಿಕೆ ನೀಡಿರುವ ಸಿಎಂ ಯಡಿಯೂರಪ್ಪ ಅವರು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ. ಪತ್ರಕರ್ತರು, ಪೊಲೀಸರು ಹಾಗೂ ಸಾರ್ವಜನಿಕರ ಮೇಲಿನ ದಾಳಿ ಒಪ್ಪಲು ಅಸಾಧ್ಯವಾದದ್ದು. ಪ್ರಚೋದನಕಾರಿ ಮತ್ತು ವದಂತಿಗಳನ್ನು ಹಬ್ಬಿಸುವುದನ್ನು ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 

ಈ ನಡುವೆ ಹಿಂಸಾಚಾರ ಸಂಬಂಧ ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಪ್ರಸ್ತುತ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ, ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪೊಲೀಸ್ ಠಾಣಾ ನಿಯಂತ್ರಣದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು, ನಗರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಆರ್'ಎಎಫ್, ಸಿಆರ್'ಪಿಎಫ್, ಸಿಐಎಸ್ಎಫ್ ಕೂಡ ಭದ್ರತೆಗೆ ಕೈಜೋಡಿಸಿದ್ದು, ಜಂಟಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?