ಸೀಮಂತ್ ಕುಮಾರ್ ಸಿಂಗ್ 
ರಾಜ್ಯ

ಬೆಂಗಳೂರು ಹಿಂಸಾಚಾರ: ಕೋಲಾರ ಸೇರಿ 6 ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ- ಐಜಿಪಿ ಸೀಮಂತ್ ಕುಮಾರ್ ಸಿಂಗ್

ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರ ಘಟನೆ ಬಳಿಕ ಕೋಲಾರ ಸೇರಿದಂತೆ ಒಟ್ಟು 6 ಪ್ರದೇಶಗಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗಿದೆ ಎಂದು ಕೇಂದ್ರೀಯ ವಲಯದ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ. 

ಬೆಂಗಳೂರು: ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರ ಘಟನೆ ಬಳಿಕ ಕೋಲಾರ ಸೇರಿದಂತೆ ಒಟ್ಟು 6 ಪ್ರದೇಶಗಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗಿದೆ ಎಂದು ಕೇಂದ್ರೀಯ ವಲಯದ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ. 

ಕೋಲಾರ, ರಾಮನಗರ, ತುಮಕೂರು, ಕೆಜಿಎಪ್, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ದಲ್ಲಿ ಹೈಅಲರ್ಟ್ ಆಗಿರುವಂತೆ ಹಾಗೂ ರಾತ್ರಿ ವೇಳೆ ಗಸ್ತು ತಿರುಗುವಂತೆ ಸೂಚಿಸಲಾಗಿದೆ. ಇನ್ನೂ ಎರಡೂ ದಿನಗಳ ಕಾಲ ಇದೇ ರೀತಿ ಭದ್ರತೆಯೊದಗಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. 

ಮುಖ್ಯ ಸರ್ಕಲ್ ಗಳಲ್ಲಿ ಈಗಾಗಲೇ ಹೆಚ್ಚುವರಿಯಾಗಿ ಭದ್ರತೆ ನಿಯೋಜಿಸಲಾಗಿದೆ. ಬುಧವಾರ ಹಾಗೂ ಗುರುವಾರ ಎರಡೂ ದಿನಗಳಲ್ಲಿ ಈ ಆರು ಪ್ರದೇಶಗಳಿಗೂ ಭೇಟಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. 

ಕೋಲಾರದ ಸುತ್ತಮುತ್ತಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಪೊಲೀಸ್ ಚೌಕಿಗಳನ್ನು ಆರಂಭಿಸಲಾಗಿದೆ. ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲೂ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಕೋಲಾರ ಎಸ್'ಪಿ ಕಾರ್ತಿಕ್ ರೆಡ್ಡಿಯವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!