ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾದಿಂದ ಗುಣಮುಖವಾಗಿ ಡಿಸ್ಚಾರ್ಜ್ ಆದವರಿಗೆ 14 ದಿನದ ಬದಲು 7 ದಿನ ಹೋಮ್ ಕ್ವಾರಂಟೈನ್

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳುವವರಿಗೆ 14 ದಿನಗಳ ಹೋಂ ಕ್ವಾರಂಟೈನ್‌ ಬದಲಾಗಿ ಏಳು ದಿನ ಮನೆಯಲ್ಲಿಯೇ ಐಸೊಲೇಶನ್‌ ನಿಯಮ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳುವವರಿಗೆ 14 ದಿನಗಳ ಹೋಂ ಕ್ವಾರಂಟೈನ್‌ ಬದಲಾಗಿ ಏಳು ದಿನ ಮನೆಯಲ್ಲಿಯೇ ಐಸೊಲೇಶನ್‌ ನಿಯಮ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಸೋಂಕು ಲಕ್ಷಣ ಇಲ್ಲದವರು ಮತ್ತು ಅಲ್ಪ ಪ್ರಮಾಣದ ಲಕ್ಷಣ ಹೊಂದಿರುವ ಪ್ರಕರಣಗಳಲ್ಲಿ ಸೋಂಕುಪೀಡಿತರು ಆಸ್ಪತ್ರೆ, ಕೊರೊನಾ ಕೇರ್‌ ಸೆಂಟರ್‌ನಿಂದ ಬಿಡುಗಡೆಯಾದ ಬಳಿಕ ಕಡ್ಡಾಯವಾಗಿ 14 ದಿನಗಳ ಹೋಂ ಕ್ವಾರಂಟೈನ್‌ನಲ್ಲಿ ಇರಬೇಕಿತ್ತು. ಆದರೆ ಸದ್ಯ ಏಳು ದಿನಗಳ ಐಸೊಲೇಶನ್‌ಗೆ ಸೂಚಿಸಲಾಗಿದೆ. 14 ದಿನಗಳ ಹೋಂ ಕ್ವಾರಂಟೈನ್‌ ನಿಯಮ ಕೈಬಿಡಲಾಗಿದೆ.

ಸೋಂಕು ಲಕ್ಷಣ ಇಲ್ಲದ ಮತ್ತು ಅಲ್ಪ ಪ್ರಮಾಣದ ಲಕ್ಷಣ ಹೊಂದಿರುವ ಪ್ರಕರಣಗಳಲ್ಲಿ ಪರೀಕ್ಷೆ ನಡೆದ ದಿನದಿಂದ 10ನೇ ದಿನಕ್ಕೆ ಬಿಡುಗಡೆ ಮಾಡಲು ಸೂಚಿಸಲಾಗಿದೆ. ಹಿಂದೆ ಸೋಂಕುಪೀಡಿತರು ಆಸ್ಪತ್ರೆ, ಕೊರೊನಾ ಕೇರ್‌ ಸೆಂಟರ್‌ಗೆ ದಾಖಲಾಗಿ 10 ದಿನದ ಬಳಿಕ ಬಿಡುಗಡೆ ಮಾಡಲಾಗುತ್ತಿತ್ತು. ಬಿಡುಗಡೆ ವೇಳೆ ಸೋಂಕು ಪರೀಕ್ಷೆ ಅಗತ್ಯವಿಲ್ಲ ಎಂದು ಮತ್ತೂಮ್ಮೆ ಸ್ಪಷ್ಟಪಡಿಸಲಾಗಿದೆ. 

ಒಂದು ವೇಳೆ ಬಿಡುಗಡೆ ಬಳಿಕ ಲಕ್ಷಣ ಕಾಣಿಸಿಕೊಂಡರೆ ಸಮೀಪದ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಬೇಕು ಎಂದು ಸೂಚಿಸಿದೆ. ಆರಂಭದಲ್ಲಿ ಸೋಂಕು ಲಕ್ಷಣ ಕಾಣಿಸಿಕೊಂಡು ಚಿಕಿತ್ಸೆ ಬಳಿಕ ಗುಣಮುಖರಾದವರಿಗೆ ಕೊನೆಯ ಮೂರು ದಿನ ಸೋಂಕು ಲಕ್ಷಣ ಇಲ್ಲದಿದ್ದರೆ 10ನೇ ದಿನ ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದು.  ಒಂದು ವೇಳೆ 14 ದಿನ ಸೋಂಕು ಲಕ್ಷಣ ಇದ್ದರೆ ಮೂರು ದಿನಗಳ ಬಳಿಕ, ಅಂದರೆ 17ನೇ ದಿನ ಸೋಂಕು ಪರೀಕ್ಷೆ ಮಾಡದೆ ಬಿಡುಗಡೆ ಮಾಡಬಹುದು.

ಸೋಂಕುಪೀಡಿತರ ಬಿಡುಗಡೆಗೆ ಮುನ್ನ ಮೂರು ದಿನ ಸೋಂಕಿನ ಲಕ್ಷಣವಿರಬಾರದು. ಉಳಿದಂತೆ ಎಚ್‌ಐವಿ, ಕಸಿ ಚಿಕಿತ್ಸೆಗೆ ಒಳಗಾದ ಸೋಂಕುಪೀಡಿತರಿಗೆ ಸಂಪೂರ್ಣ ಗುಣಮುಖರಾದ ಬಳಿಕ ಒಮ್ಮೆ ಸೋಂಕು ಪರೀಕ್ಷೆ ಮಾಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಕೆಂದು ಪರಿಷ್ಕೃತ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT